ಬ್ರೇಕಿಂಗ್ ನ್ಯೂಸ್
02-02-23 12:51 pm Mangalore Correspondent ಕರಾವಳಿ
ಪುತ್ತೂರು, ಫೆ.2 : ತನ್ನ ಪತ್ನಿಯ ಜೊತೆ ವಿಟ್ಲದ ಬಿಜೆಪಿ ಮುಖಂಡನೊಬ್ಬ ಕಾರಿನಲ್ಲಿ ತೆರಳುತ್ತಿದ್ದುದನ್ನು ಗಮನಿಸಿದ ಮಹಿಳೆಯ ಪತಿರಾಯ ಕಾರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಹಿಡಿದಿದ್ದಲ್ಲದೆ, ಬಿಜೆಪಿ ಮುಖಂಡನಿಗೆ ಧರ್ಮದೇಟು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಈ ವೇಳೆ, ಬಿಜೆಪಿ ಮುಖಂಡ ಮಹಿಳೆ ಹಾಗೂ ಕಾರನ್ನು ಬಿಟ್ಟು ಪಕ್ಕದ ಗುಡ್ಡದಲ್ಲಿ ಪರಾರಿಯಾಗಿದ್ದಾನೆ. ಘಟನೆಯ ವಿಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ಪತಿ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದವರಾಗಿದ್ದು ಪುತ್ತೂರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ತನ್ನ ಪತ್ನಿ (29) ಹಾಗೂ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ, ಪುಣಚ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ (44) ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರುದಾರ ವ್ಯಕ್ತಿ ಮಹಿಳೆಯನ್ನು ಮದುವೆಯಾಗಿ 9 ವರ್ಷವಾಗಿದ್ದು, ಅವರಿಗೆ ಎಂಟು ವರ್ಷದ ಹೆಣ್ಣು ಮಗಳಿದ್ದಾಳೆ. ಪತ್ನಿ ಕೆಲವು ವರ್ಷಗಳಿಂದ ತನ್ನ ಜತೆ ಇರದೇ ಪ್ರತ್ಯೇಕ ವಾಸಿಸುತ್ತಿದ್ದಾಳೆ. ಆದರೇ ನಾವು ವಿವಾಹ ವಿಚ್ಛೇದನ ಪಡೆದುಕೊಂಡಿಲ್ಲ. ನಮ್ಮಿಬ್ಬರ ವಿವಾಹ ಊರ್ಜಿತದಲ್ಲಿದೆಯೆಂದು ದೂರಿನಲ್ಲಿ ತಿಳಿಸಿದ್ದಾರೆ.
ಜ.31ರಂದು ಪತ್ನಿ ಸಮೀಪದ ಜಾತ್ರೆಗೆಂದು ಹೋದವಳನ್ನು ಹರಿ ಪ್ರಸಾದ್ ಅನೈತಿಕ ಸಂಬಂಧ ದುರುದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರನ್ನು ನನ್ನ ಮೋಟಾರ್ ಬೈಕ್ನಲ್ಲಿ ಪುತ್ತೂರಿನಿಂದ ಹಿಂಬಾಲಿಸಿದ್ದೇನೆ. ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಕಾರನ್ನು ತಡೆಯಲು ಪ್ರಯತ್ನಿಸಿದಾಗ ಹರಿಪ್ರಸಾದ್ ಬೈಕ್ ಮೇಲೆ ವಾಹನ ಚಲಾಯಿಸಿ ಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಪ್ಪಿಸಿಕೊಂಡು ಕಾರನ್ನು ತಡೆದಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕೂಡಲೇ ಹರಿ ಪ್ರಸಾದ್ ಕಾರು ಹಾಗೂ ನನ್ನ ಪತ್ನಿಯನ್ನು ಬಿಟ್ಟು ಪರಾರಿಯಾಗಿರುತ್ತಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
Puttur illicit affair with married woman, BJP leader Hariprasad Yadav caught red handed, thrashed by husband in Sullia. Video of this has now gone viral on social media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm