ಬ್ರೇಕಿಂಗ್ ನ್ಯೂಸ್
04-02-23 05:35 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಮಂಗಳೂರಿನ ಮೂವರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರಿನ ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಜ್ವಾನ್ (23), ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಹಾಗು ಬಾಂಗ್ಲಾದೇಶದ ಪ್ರಜೆ ನಾಸೀರ್ ಎಂದು ಗುರುತಿಸಲಾಗಿದೆ ಎಂದು ಮೃತರ ಸಂಬಂಧಿಕರು ಮಾಹಿತಿ ನೀಡಿದ್ದಾರೆ.

ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್-ಹಸಾ ಎಂಬ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಹೆದ್ದಾರಿಗೆ ಒಂಟೆ ಅಡ್ಡಬಂದಿದ್ದು ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಜ್ವಾನ್ 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಇವರು ಬದ್ರುದ್ದೀನ್ ಮತ್ತು ಅಲೀಮಾ ದಂಪತಿಯ ಒಬ್ಬನೇ ಮಗ. ಈ ದಂಪತಿಗೆ ಇನ್ನು ಮೂವರು ಪುತ್ರಿಯರು ಇದ್ದಾರೆ. ಮೃತ ಯುವಕರು ಅಲ್ಲಿನ 'ಅಲ್ ಸ್ಯಾಕೊ' ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು. ರಾತ್ರಿ ವೇಳೆ ಕೆಲಸಕ್ಕೆ ತೆರಳುತ್ತಿರುವಾಗ ಹಠಾತ್ತನೆ ಒಂಟೆ ರಸ್ತೆಗೆ ಅಡ್ಡ ಬಂದ ಪರಿಣಾಮ ವಾಹನ ನಿಯಂತ್ರಿಸಲಾಗದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪಾರ್ಥೀವ ಶರೀರಗಳನ್ನು ಊರಿಗೆ ತರಿಸುವ ಬಗ್ಗೆ ಮಂಗಳೂರಿನ ಸಂಘಟನೆಗಳ ಪ್ರಮುಖರು ಪ್ರಯತ್ನ ನಡೆಸುತ್ತಿದ್ದಾರೆ.
In a ghastly road accident that occurred at Al Hassa of Saudi Arabia, three natives of Dakshina Kannada (DK) died on the night of Friday February 3 night. In total, four non-resident employees lost their lives in the accident. One is a Bangladesh national. It is said that the accident occurred as a camel ran across the car. The deceased are identified as Rizwan from Kadike near Haleangadi, Shihab from Krishnapura Surathkal, Akil, a resident of Bengare in Mangaluru and Nasir from Bangladesh.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm