ಬ್ರೇಕಿಂಗ್ ನ್ಯೂಸ್
04-02-23 05:35 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಮಂಗಳೂರಿನ ಮೂವರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರಿನ ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಜ್ವಾನ್ (23), ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಹಾಗು ಬಾಂಗ್ಲಾದೇಶದ ಪ್ರಜೆ ನಾಸೀರ್ ಎಂದು ಗುರುತಿಸಲಾಗಿದೆ ಎಂದು ಮೃತರ ಸಂಬಂಧಿಕರು ಮಾಹಿತಿ ನೀಡಿದ್ದಾರೆ.
ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್-ಹಸಾ ಎಂಬ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಹೆದ್ದಾರಿಗೆ ಒಂಟೆ ಅಡ್ಡಬಂದಿದ್ದು ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಜ್ವಾನ್ 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಇವರು ಬದ್ರುದ್ದೀನ್ ಮತ್ತು ಅಲೀಮಾ ದಂಪತಿಯ ಒಬ್ಬನೇ ಮಗ. ಈ ದಂಪತಿಗೆ ಇನ್ನು ಮೂವರು ಪುತ್ರಿಯರು ಇದ್ದಾರೆ. ಮೃತ ಯುವಕರು ಅಲ್ಲಿನ 'ಅಲ್ ಸ್ಯಾಕೊ' ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು. ರಾತ್ರಿ ವೇಳೆ ಕೆಲಸಕ್ಕೆ ತೆರಳುತ್ತಿರುವಾಗ ಹಠಾತ್ತನೆ ಒಂಟೆ ರಸ್ತೆಗೆ ಅಡ್ಡ ಬಂದ ಪರಿಣಾಮ ವಾಹನ ನಿಯಂತ್ರಿಸಲಾಗದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪಾರ್ಥೀವ ಶರೀರಗಳನ್ನು ಊರಿಗೆ ತರಿಸುವ ಬಗ್ಗೆ ಮಂಗಳೂರಿನ ಸಂಘಟನೆಗಳ ಪ್ರಮುಖರು ಪ್ರಯತ್ನ ನಡೆಸುತ್ತಿದ್ದಾರೆ.
In a ghastly road accident that occurred at Al Hassa of Saudi Arabia, three natives of Dakshina Kannada (DK) died on the night of Friday February 3 night. In total, four non-resident employees lost their lives in the accident. One is a Bangladesh national. It is said that the accident occurred as a camel ran across the car. The deceased are identified as Rizwan from Kadike near Haleangadi, Shihab from Krishnapura Surathkal, Akil, a resident of Bengare in Mangaluru and Nasir from Bangladesh.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm