ಬ್ರೇಕಿಂಗ್ ನ್ಯೂಸ್
09-02-23 04:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಫೆ.11ರಂದು ಮಂಗಳೂರಿನಲ್ಲಿ ಆಯೋಜಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.
ಪುತ್ತೂರಿನಲ್ಲಿ ಕ್ಯಾಂಪ್ಕೋ ಕಾರ್ಯಕ್ರಮ ಮುಗಿಸಿ ಸಂಜೆ ಮಂಗಳೂರಿಗೆ ಬಂದು ರೋಡ್ ಶೋ ನಡೆಸುವುದೆಂದು ನಿಶ್ಚಯಿಸಲಾಗಿತ್ತು. ಬಿಜೆಪಿ ಕಾರ್ಯಕರ್ತರನ್ನು ಸೇರಿಸಿ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ ಏರ್ಪೋರ್ಟ್ ನಿಂದ ಕಾವೂರು ಅಥವಾ ಪದವಿನಂಗಡಿ ವರೆಗೆ ರೋಡ್ ಶೋ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಪುತ್ತೂರಿನಿಂದ ಮಂಗಳೂರಿಗೆ ಹೆಲಿಕಾಪ್ಟರ್ ನಲ್ಲಿ ಬಂದು ತಲುಪುವಾಗಲೇ ಸಂಜೆ ಆರು ಗಂಟೆ ಆಗುವುದರಿಂದ ಆನಂತರ ರೋಡ್ ಶೋ ನಡೆಸಲು ಸೆಕ್ಯುರಿಟಿ ಕ್ಲಿಯರೆನ್ಸ್ ಸಿಕ್ಕಿಲ್ಲ. ಎಸ್ ಪಿಜಿ ಪಡೆ ಭದ್ರತಾ ದೃಷ್ಟಿಯಿಂದ ಅವಕಾಶ ನಿರಾಕರಿಸಿದ್ದು, ಹಾಗಾಗಿ ರೋಡ್ ಶೋ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.

ಮಂಗಳೂರಿನಲ್ಲಿ ಆರು ಜಿಲ್ಲೆಗಳ ವ್ಯಾಪ್ತಿಯ ವಿಭಾಗ ಮಟ್ಟದ ಪ್ರತಿನಿಧಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪದವಿನಂಗಡಿಯ ಸಭಾಂಗಣದಲ್ಲಿ ಸಭೆ ನಡೆಸುವುದು ಮತ್ತು ಅಲ್ಲಿ ವರೆಗೂ ಏರ್ಪೋರ್ಟ್ ನಿಂದ ಅಮಿತ್ ಷಾರನ್ನು ರೋಡ್ ಶೋದಲ್ಲಿ ಕರೆತರುವುದು ಬಿಜೆಪಿ ಪ್ಲಾನ್ ಆಗಿತ್ತು. ಆದರೆ ಪದವಿನಂಗಡಿಯ ಕೊರಗಜ್ಜನ ಕೋಲ ಅದೇ ದಿನ ಇರುವುದರಿಂದ ಅಲ್ಲಿ ಜನ ಸೇರುವುದು ಮತ್ತು ರಸ್ತೆಯನ್ನು ಪೂರ್ತಿ ಬ್ಲಾಕ್ ಮಾಡಬೇಕೆಂಬ ಎಸ್ ಪಿಜಿ ಬೇಡಿಕೆಗೆ ಬಿಜೆಪಿ ಪ್ರಮುಖರು ಒಪ್ಪಿಗೆ ನೀಡಿಲ್ಲ.
ಆನಂತರ, 150 ಮಂದಿಯ ಪ್ರತಿನಿಧಿಗಳ ಸಮಾವೇಶವನ್ನು ಕೆಂಜಾರಿನ ಶ್ರೀದೇವಿ ಕಾಲೇಜಿನ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಕಾವೂರಿನ ವರೆಗೆ ರೋಡ್ ಶೋ ನಡೆಸುವುದೆಂದು ಬಿಜೆಪಿ ನಾಯಕರ ಒತ್ತಾಸೆಯಿತ್ತು. ಆದರೆ, ಇತ್ತ ಅಮಿತ್ ಷಾ ಮಂಗಳೂರು ಏರ್ಪೋರ್ಟ್ ತಲುಪುವಾಗಲೇ ಸಂಜೆ 6 ಗಂಟೆ ಆಗುತ್ತದೆ ಎನ್ನುವ ಮಾಹಿತಿ ಬಂದಿರುವುದರಿಂದ ಜಿಲ್ಲಾ ಬಿಜೆಪಿ ಕೈಗೊಂಡಿದ್ದ ರೋಡ್ ಶೋ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಶ್ರೀದೇವಿ ಕಾಲೇಜಿನಲ್ಲಿ ಪ್ರತಿನಿಧಿಗಳ ಸಮಾವೇಶ ಮಾತ್ರ ನಡೆಯಲಿದೆ. ಅಲ್ಲಿ ಮಾಧ್ಯಮಕ್ಕಾಗಲೀ, ಇತರೇ ಸಾರ್ವಜನಿಕರಿಗಾಗಲೀ ಪ್ರವೇಶ ಇಲ್ಲವೆಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಅಮಿತ್ ಷಾ ರೋಡ್ ಶೋ ನಡೆಸುವುದಕ್ಕೆ ಭಾರೀ ಟೀಕೆಯೂ ವ್ಯಕ್ತವಾಗಿತ್ತು. ಶಿರಾಡಿ ಘಾಟಿ ಹೊಂಡ ಬಿದ್ದು ಗಬ್ಬೆದ್ದು ಹೋಗಿರುವುದರಿಂದ ಅಮಿತ್ ಷಾ ಅವರನ್ನು ಆ ದಾರಿಯಲ್ಲೇ ರೋಡ್ ಶೋ ನಡೆಸುವಂತೆ ಕಾಂಗ್ರೆಸ್ ನಾಯಕರು ಸಲಹೆ ಮಾಡಿದ್ದರು. ಟೀಕೆ, ಟಿಪ್ಪಣಿ ನಡುವೆ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮವೇ ರದ್ದಾಗಿದೆ.
Amit Shah road show in Mangalore cancelled due to security reasons by SPG. Union Minister for Home and Co-operation Amit Shah will be visiting Puttur in Dakshina Kannada district to participate in a co-operative convention on February 11. The convention is being held at Puttur in connection with the golden jubilee celebrations of the central arecanut and cocoa marketing and processing co-operative limited (CAMPCO).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm