ಬ್ರೇಕಿಂಗ್ ನ್ಯೂಸ್
11-02-23 10:33 pm Mangalore Correspondent ಕರಾವಳಿ
ಮಂಗಳೂರು, ಫೆ.11: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಬಲ ಆಗಿರುವ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳ ಪ್ರತಿನಿಧಿಗಳ ಸಭೆ ಮಂಗಳೂರಿನ ಏರ್ಪೋರ್ಟ್ ಬಳಿಯ ಶ್ರೀದೇವಿ ಕಾಲೇಜಿನಲ್ಲಿ ನಡೆದಿದೆ. ಸಭೆಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಾಗುವಂತೆ ಅಮಿತ್ ಷಾ ಸೂಚನೆ ನೀಡಿದ್ದಾರೆ.
ಸಭೆಯ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣೆ ಹತ್ತಿರ ಬಂದಿದ್ದು, ಮುಖಂಡರು ಸೇರಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತೊಡಗಬೇಕು. ಒಂದು ತಿಂಗಳ ಕಾಲ ಕಾಲಾವಕಾಶವಿದ್ದು, ಹಳ್ಳಿ ಹಳ್ಳಿಗಳಿಗೆ, ಮನೆ ಮನೆಗೂ ಹೋಗಬೇಕು. ಆಬಳಿಕ ತಾನು ಮತ್ತೊಂದು ಬಾರಿ ನಿಮ್ಮೊಂದಿಗೆ ಮಾತನಾಡುತ್ತೇನೆ. ಎಲ್ಲರೂ ಪಕ್ಷ ಕಟ್ಟುವ ಕಾರ್ಯದಲ್ಲಿ ತೊಡಗಿಸಬೇಕು. ನಿಶ್ಚಿತವಾಗಿ ನಾವು ಅಧಿಕಾರಕ್ಕೆ ಬರುತ್ತೇವೆ. ಯಾವುದೇ ಸಂಶಯವಿಲ್ಲ ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆಂದು ಯಡಿಯೂರಪ್ಪ ಹೇಳಿದರು.


ಸಚಿವ ಸುನಿಲ್ ಕುಮಾರ್ ಮಾತನಾಡಿ, ಎರಡು ವಿಭಾಗದ ಆರು ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖರ ಸಭೆ ನಡೆದಿದೆ. 33 ವಿಧಾನಸಭಾ ಕ್ಷೇತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ. 33 ಕ್ಷೇತ್ರಗಳನ್ನೂ ಗೆಲ್ಲುವ ಸೂತ್ರಗಳನ್ನ ನಮ್ಮ ಮುಂದೆ ಇಟ್ಟಿದ್ದಾರೆ. ಈ ಬಾರಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ ಅಗಬೇಕು. ಈಗ 29 ರಲ್ಲಿ ಬಿಜೆಪಿ ಶಾಸಕರಿದ್ದರೆ 4 ಕಾಂಗ್ರೆಸ್ ಕೈಯಲ್ಲಿದೆ. ಉಳಿದ ನಾಲ್ಕು ಕ್ಷೇತ್ರಗಳನ್ನೂ ಗೆಲ್ಲುವ ಕುರಿತ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾರವಾರ, ಶಿವಮೊಗ್ಗ, ಕೊಡಗು ಸೇರಿದಂತೆ ಆರು ಜಿಲ್ಲೆಗಳ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸೇರಿದಂತೆ ಆರು ಜಿಲ್ಲೆಗಳ ಶಾಸಕರು, ಬಿಜೆಪಿಯ ಮುಖಂಡರು ಭಾಗಿಯಾಗಿದ್ದರು. ಸಭೆಗೂ ಮುನ್ನ ಕೆಂಜಾರಿನಲ್ಲಿ ತೆರೆದ ವಾಹನದಲ್ಲಿ ಅಮಿತ್ ಷಾ, ಯಡಿಯೂರಪ್ಪ, ಸಿಎಂ ಬೊಮ್ಮಾಯಿ ರೋಡ್ ಶೋ ನಡೆಸಿದರು.
6 districts, 33 constituencies of Karnataka state is the target for BJPs Victory, Amit Shah hidden meeting in Mangalore. Speaking to Media former CM Yediyurappa stated that every leader must be involved in active campaigning of parties in every corner of the state.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm