ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm