ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm