ಬ್ರೇಕಿಂಗ್ ನ್ಯೂಸ್
12-02-23 08:11 pm Udupi Correspondent ಕರಾವಳಿ
ಕುಂದಾಪುರ, ಫೆ.12 : ಶಿರೂರು ಟೋಲ್ಗೇಟ್ ಬಳಿಯ ನಿವಾಸಿ, ಕಂಬಳ ಒಟಗಾರ ಸುರೇಶ್ ಪೂಜಾರಿ (37) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋರ್ಟ್ ಪ್ರೋಸೆಸ್ ಹುದ್ದೆಯಲ್ಲಿದ್ದ ಅವರು ಒಂದು ವರ್ಷದ ಹಿಂದೆ ಅಮಾನುತುಗೊಂಡಿದ್ದು ಅದೇ ಚಿಂತೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶಿರೂರಿನ ಪತ್ನಿ ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದರು. ಸಂಜೆ ಮನೆಯಿಂದ ಹೊರಬಂದ ಅವರು, ಪತ್ನಿ ಮೊಬೈಲ್ಗೆ ಮೆಸೇಜ್ ಮಾಡಿದ್ದರು. 'ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ಮೇಸೆಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಹೇಡಿಯಂತೆ ಬದುಕಲು ಆಗುವುದಿಲ್ಲ. ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ' ಎಂದು ಮೇಸೆಜ್ ಕಳುಹಿಸಿದ್ದರು.
ತಕ್ಷಣ ಸಂಬಂಧಿಕರು ಹುಡುಕಾಟ ಆರಂಭಿಸಿದ್ದು ಟೋಲ್ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ ಪೂಜಾರಿ ವಿರುದ್ದ ಕಳೆದ ವರ್ಷ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಸುರೇಶ್ ನಿರ್ವಹಿಸುತ್ತಿದ್ದ ಕೋರ್ಟ್ ಪ್ರೋಸೆಸ್ ಕೆಲಸದಿಂದ ಅಮಾನತಾಗಿದ್ದು ಈವರೆಗೆ ರಿವೋಕ್ ಆಗಿರಲಿಲ್ಲ. ಈ ಬಗ್ಗೆ ನಿತ್ಯ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದರು. ಕೆಲಸವಿಲ್ಲದ ಚಿಂತೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರೇಶ್ ಕಂಬಳದ ಪ್ರೋತ್ಸಾಹಕ, ಸಂಘಟಕನಾಗಿದ್ದು, ಕಂಬಳದ ಹಗ್ಗದ ವಿಭಾಗದ ಓಟಗಾರರಾಗಿದ್ದರು. ಅಲ್ಲದೆ ಇತ್ತೀಚೆಗೆ ಕಂಬಳದಲ್ಲಿ ಓಟದ ಮಾಪನ ಮಾಡುವ ಸುಧಾರಿತ ಸೆನ್ಸಾರ್ ಯಂತ್ರವನ್ನು ನಿರ್ವಹಿಸುತ್ತಿದ್ದರು. ಕ್ರಿಯಾಶೀಲ ವ್ಯಕ್ತಿಯಾಗಿದ್ದ ಸುರೇಶ್ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು.
Kundapur Kambala racer commits suicide after losing job.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm