ಬ್ರೇಕಿಂಗ್ ನ್ಯೂಸ್
12-02-23 08:11 pm Udupi Correspondent ಕರಾವಳಿ
ಕುಂದಾಪುರ, ಫೆ.12 : ಶಿರೂರು ಟೋಲ್ಗೇಟ್ ಬಳಿಯ ನಿವಾಸಿ, ಕಂಬಳ ಒಟಗಾರ ಸುರೇಶ್ ಪೂಜಾರಿ (37) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋರ್ಟ್ ಪ್ರೋಸೆಸ್ ಹುದ್ದೆಯಲ್ಲಿದ್ದ ಅವರು ಒಂದು ವರ್ಷದ ಹಿಂದೆ ಅಮಾನುತುಗೊಂಡಿದ್ದು ಅದೇ ಚಿಂತೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶಿರೂರಿನ ಪತ್ನಿ ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದರು. ಸಂಜೆ ಮನೆಯಿಂದ ಹೊರಬಂದ ಅವರು, ಪತ್ನಿ ಮೊಬೈಲ್ಗೆ ಮೆಸೇಜ್ ಮಾಡಿದ್ದರು. 'ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ಮೇಸೆಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಹೇಡಿಯಂತೆ ಬದುಕಲು ಆಗುವುದಿಲ್ಲ. ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ' ಎಂದು ಮೇಸೆಜ್ ಕಳುಹಿಸಿದ್ದರು.
ತಕ್ಷಣ ಸಂಬಂಧಿಕರು ಹುಡುಕಾಟ ಆರಂಭಿಸಿದ್ದು ಟೋಲ್ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ ಪೂಜಾರಿ ವಿರುದ್ದ ಕಳೆದ ವರ್ಷ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಸುರೇಶ್ ನಿರ್ವಹಿಸುತ್ತಿದ್ದ ಕೋರ್ಟ್ ಪ್ರೋಸೆಸ್ ಕೆಲಸದಿಂದ ಅಮಾನತಾಗಿದ್ದು ಈವರೆಗೆ ರಿವೋಕ್ ಆಗಿರಲಿಲ್ಲ. ಈ ಬಗ್ಗೆ ನಿತ್ಯ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದರು. ಕೆಲಸವಿಲ್ಲದ ಚಿಂತೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರೇಶ್ ಕಂಬಳದ ಪ್ರೋತ್ಸಾಹಕ, ಸಂಘಟಕನಾಗಿದ್ದು, ಕಂಬಳದ ಹಗ್ಗದ ವಿಭಾಗದ ಓಟಗಾರರಾಗಿದ್ದರು. ಅಲ್ಲದೆ ಇತ್ತೀಚೆಗೆ ಕಂಬಳದಲ್ಲಿ ಓಟದ ಮಾಪನ ಮಾಡುವ ಸುಧಾರಿತ ಸೆನ್ಸಾರ್ ಯಂತ್ರವನ್ನು ನಿರ್ವಹಿಸುತ್ತಿದ್ದರು. ಕ್ರಿಯಾಶೀಲ ವ್ಯಕ್ತಿಯಾಗಿದ್ದ ಸುರೇಶ್ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು.
Kundapur Kambala racer commits suicide after losing job.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm