ಬ್ರೇಕಿಂಗ್ ನ್ಯೂಸ್
13-02-23 08:37 pm Mangalore Correspondent ಕರಾವಳಿ
ಉಳ್ಳಾಲ, ಫೆ.13: ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದ ಉಳಿಯದಲ್ಲಿ ನಡೆದಿದೆ. ಫಿಶ್ ಮೀಲ್ ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಿಶ್ರಣಗೊಂಡ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿರುವ ಬಗ್ಗೆ ಮಾಲೀಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಉಳಿಯ ನಿವಾಸಿ ಬ್ಲೇರಾ ಡಿಸೋಜ ಎಂಬವರಿಗೆ ಸೇರಿದ ಸಾವಿರಾರು ಸಾಕು ಮೀನುಗಳು ಸಾವನ್ನಪ್ಪಿವೆ. 3.5 ಲಕ್ಷ ರೂಪಾಯಿ ಬೆಲೆಬಾಳುವ ಮೀನುಗಳು ಸಾವನ್ನಪ್ಪಿದ್ದು ನಷ್ಟ ಅನುಭವಿಸಿದ್ದಾರೆ. ಮುದ್ರಾ ಯೋಜನೆಯಡಿ ಸಾಲ ಮಾಡಿ ಬ್ಲೇರಾ ಅವರು ಮೀನಿನ ಕೃಷಿ ಆರಂಭಿಸಿದ್ದರು. ಎರಡು ವರ್ಷಗಳ ಹಿಂದೆ ವೃತ್ತಿಯನ್ನು ಆರಂಭಿಸಿದ ಬ್ಲೇರಾ ಅವರಿಗೆ ಇದೀಗ ಎರಡನೇ ಬಾರಿಯ ಮೀನಿನ ಕೃಷಿ ಸಂಪೂರ್ಣ ನಷ್ಟವನ್ನು ಉಂಟು ಮಾಡಿದೆ.


2022 ರ ನವೆಂಬರ್ ತಿಂಗಳಲ್ಲಿ ಈ ಬಾರಿಯ ಪಂಜರ ಕೃಷಿಯ ಮರಿಗಳನ್ನು ಹಾಕಲಾಗಿತ್ತು. ಪ್ಯಾಂಪೆನೋ ತಳಿಯ 4,500 ಮರಿಗಳು ಬೃಹತ್ ಗಾತ್ರದಲ್ಲಿ ಬೆಳೆದಿತ್ತು. ಒಂದೂವರೆ ವರ್ಷದಿಂದ ಮೀನು ಯಾವುದೇ ತೊಂದರೆಯಿಲ್ಲದೆ ಇತ್ತು. ಫೆ.11 ರಂದು ಬೆಳಗ್ಗೆ ಬ್ಲೇರಾ ಅವರು ನದಿ ಬದಿಗೆ ತೆರಳಿದಾಗ 22 ಮೀನುಗಳು ಸಾವನ್ನಪ್ಪಿದ್ದವು. ಆನಂತರ ಇಂದು ಪಂಜರದಲ್ಲಿದ್ದಂತಹ ಎಲ್ಲಾ ಮೀನುಗಳು ಸಾವನ್ನಪ್ಪಿದ್ದು ನದಿ ನೀರಿನಲ್ಲಿ ತೇಲುತ್ತಿತ್ತು. ಜೊತೆಗೆ ಪಚ್ಚಿಳೆ(ಚಿಪ್ಪಿನ ಮೀನು) ಕೂಡ ಬಾಯ್ತೆರೆದಿದೆ. ನದಿ ನೀರು ಮಲಿನದಿಂದ ಘಟನೆ ಸಂಭವಿಸಿರುವ ಶಂಕೆ ಇದೆ.


ಕಾರ್ಖಾನೆಯಿಂದ ಹೊರಬಿಡುವ ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರಿನಿಂದ ಘಟನೆ ಸಂಭವಿಸಿರುವ ಶಂಕೆ ಇದ್ದು, ಎಕ್ಕೂರು ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾನಿಲಯದ ವಿಜ್ಞಾನಿ ಹಾಗೂ ಮೀನುಗಾರಿಕಾ ಇಲಾಖೆಯವರು ಭೇಟಿ ನೀಡಿ ನೀರಿನ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ.
A large number of fish reared by pisciculture in Netravati river have died. The owners have suspected that poisonous effluents which are being released into the river have contaminated the water resulting in their death. The fish being reared by Blara D’ Souza worth Rs 2.5 lacs have died. Blara D’ Souza had started rearing the fish after taking a loan from Mudra bank two years ago.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm