ಬ್ರೇಕಿಂಗ್ ನ್ಯೂಸ್
21-10-20 09:47 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 21: ಭಾರತ್ ಕೋ- ಆಪರೇಟಿವ್ ಬ್ಯಾಂಕ್ ರೂವಾರಿ, ಬಿಲ್ಲವರ ಮಹಾಮಂಡಲ ಯೂನಿಯನ್ ಸ್ಥಾಪಕಾಧ್ಯಕ್ಷ , ಕುದ್ರೋಳಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮುಂಬೈಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಜಯ ಸಿ.ಸುವರ್ಣ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಮುಂಬೈನಲ್ಲಿ ಭಾರತ್ ಕೋ- ಆಪರೇಟಿವ್ ಬ್ಯಾಂಕ್ ಸ್ಥಾಪಕರಾಗಿದ್ದಲ್ಲೆ ಮೊದಲ ಅಧ್ಯಕ್ಷರಾಗಿ, ಬ್ಯಾಂಕ್ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ವಿವಿಧ ಶಾಖೆಗಳನ್ನು ಸ್ಥಾಪಿಸಿ ಬೆಳವಣಿಗೆಗೆ ಕಾರಣರಾಗಿದ್ದರು. ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ನಿಕಟವರ್ತಿಯಾಗಿದ್ದ ಜಯ ಸಿ. ಸುವರ್ಣ ಎಲ್ಲರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದರು. ಮುಂಬೈನಲ್ಲಿ ವಿವಿಧೆಡೆ ಬಿಲ್ಲವ ಭವನ, ಬಿಲ್ಲವ ಯೂನಿಯನ್ ಸ್ಥಾಪಿಸಿ, ಮೂಲ್ಕಿಯಲ್ಲಿ ಮಹಾಮಂಡಲ ಭವನ ನಿರ್ಮಿಸಿದ್ದರು. ಮೂಲತಃ ಮೂಲ್ಕಿಯ ಅಡ್ವೆಯವರಾಗಿದ್ದ ಜಯ ಸುವರ್ಣ ಸಣ್ಣ ವಯಸ್ಸಿನಲ್ಲೇ ಮುಂಬೈಗೆ ತೆರಳಿ, ಹೊಟೇಲ್ ಉದ್ಯಮ ಆರಂಭಿಸಿದ್ದರು.
1991 ರಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವನ್ನು ನವೀಕರಣಗೊಳಿಸುವಲ್ಲಿ ಜನಾರ್ದನ ಪೂಜಾರಿಯವರ ಜೊತೆ ಜಯ ಸಿ. ಸುವರ್ಣ ಶ್ರಮ ವಹಿಸಿದ್ದರು. ಆಬಳಿಕ ದೇವಸ್ಥಾನದ ಪ್ರತೀ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು.
ಅಲ್ಪಕಾಲದ ಅಸೌಖ್ಯದಲ್ಲಿದ್ದ ಜಯ ಸಿ. ಸುವರ್ಣ ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು (ಅ.21) ಮಧ್ಯಾಹ್ನ 3 ಗಂಟೆಗೆ ಮುಂಬೈನಲ್ಲಿ ನಡೆಯಲಿದೆ. ಇವರು ಪತ್ನಿ ಮತ್ತು ನಾಲ್ವರು ಪುತ್ರರನ್ನು ಅಗಲಿದ್ದಾರೆ.
Billawara Association Mumbai former president, honorary life president, honorary president of Rashtriya Billava Maha Mandal Mulki, and former chairman of Bharat Co-operative Bank Limited, Karnataka Rajyotsava Awardee Jaya C Suvarna died at his Nilgiri Residence East of Goregaon early on the morning of Wednesday October 21. He was 74.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm