ಬ್ರೇಕಿಂಗ್ ನ್ಯೂಸ್
14-02-23 07:47 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಗಣಿಗಾರಿಕೆಯಿಂದ ನಲುಗುತ್ತಿರುವ ಕಾರಿಂಜೇಶ್ವರ ದೇವಸ್ಥಾನದ ರಕ್ಷಣೆಗೆ ನಿಲ್ಲದ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಹಿಂದು ಜಾಗರಣ ವೇದಿಕೆ ಮುಂದಾಗಿದೆ. ರಾಜ್ಯ ಸರ್ಕಾರದ ಗಮನಸೆಳೆಯುವ ಯತ್ನವಾಗಿ ಶಿವರಾತ್ರಿಯಂದೇ ಶಿವಭಕ್ತರು ಮಾಲಾಧಾರಿಗಳಾಗಿ ಪಾದಯಾತ್ರೆ ನಡೆಸಲಿದ್ದಾರೆ.
ಈ ಬಗ್ಗೆ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಈ ಬಾರಿಯ ಶಿವರಾತ್ರಿಗೆ ಸಾವಿರಾರು ಭಕ್ತರು ಶಿವ ಮಾಲಾಧಾರಣೆ ಮಾಡಲಿದ್ದಾರೆ. ಫೆ.16ರಂದು ಮಾಲೆ ಧರಿಸಿ 18ರ ಶಿವರಾತ್ರಿಯಂದು ವಗ್ಗದಿಂದ ಪಾದಯಾತ್ರೆ ನಡೆಸಲಿದ್ದಾರೆ. ಕಾರಿಂಜೇಶ್ವರ ದೇವರ ಮುಂಭಾಗದಲ್ಲಿ ಕೋಟಿ ಜಪಯಜ್ಞ ನಡೆಸಲಿದ್ದಾರೆ ಎಂದು ಹೇಳಿದರು.
ಬಂಟ್ವಾಳದ ಕಾರಿಂಜೇಶ್ವರ ಬೆಟ್ಟದಲ್ಲಿ ನೆಲೆಯಾಗಿರುವ ಶಿವನ ಸನ್ನಿಧಾನ ಅತ್ಯಂತ ಅಪರೂಪದ ದೇವಸ್ಥಾನ. ಏಕಶಿಲಾ ಬೆಟ್ಟದಲ್ಲಿ ಶಿವನ ಆಲಯವಿದೆ. ಇದರ ಸನಿಹದಲ್ಲಿ ಕಲ್ಲು ಗಣಿಗಾರಿಕೆ, ಸ್ಫೋಟ ನಡೆಸಿದರೆ ಈ ಬೆಟ್ಟಕ್ಕೆ ಧಕ್ಕೆಯಾಗಲಿದೆ. ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸಿದರೂ ರಾಜ್ಯ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಎರಡು ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಬೇಕೆಂಬ ನಮ್ಮ ಆಗ್ರಹವನ್ನು ಮನ್ನಣೆ ನೀಡಿಲ್ಲ ಎಂದರು.
ಎರಡು ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದೆ. ಈ ಬಗ್ಗೆ ಆದೇಶ ಬಂದಿಲ್ಲ. ಇದರ ನಡುವೆ, ಗಣಿಗಾರಿಕೆ ನಡೆಸುವವರು ಹೈಕೋರ್ಟಿಗೆ ಅಪೀಲು ಮಾಡಿ ತಮ್ಮ ಪರವಾಗಿ ಆದೇಶ ತರಿಸಿದ್ದಾರೆ. ಹೀಗಾಗಿ ಕಾರಿಂಜ ಬೆಟ್ಟ ಇರುವ ಜಾಗವನ್ನು ಧಾರ್ಮಿಕ ಸೂಕ್ಷ್ಮ ವಲಯ ಎಂದು ಘೋಷಿಸಲು ಒತ್ತಾಯಿಸಿ ಮಾಲಾಧಾರಣೆ ಮಾಡುತ್ತಿದ್ದೇವೆ. ಆಮೂಲಕ ಬೆಟ್ಟದ ರಕ್ಷಣೆಗೆ ದೇವರ ಮೊರೆ ಹೋಗುತ್ತೇವೆ. ಸರಕಾರಕ್ಕೆ ಒಳ್ಳೆಯ ಬುದ್ಧಿ ಕೊಡಲೆಂದು ಪ್ರಾರ್ಥಿಸುತ್ತೇವೆ ಎಂದರು.
ಹಿಂದು ಜಾಗರಣ ವೇದಿಕೆಯ ವತಿಯಿಂದ ಎರಡು ವರ್ಷಗಳ ಹಿಂದೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇದೇ ವಿಚಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಚುನಾವಣೆ ಹೊತ್ತಿಗೆ ಮತ್ತೊಂದು ಸುತ್ತಿನ ಹೋರಾಟಕ್ಕೆ ಕಾರ್ಯಕರ್ತರು ಮುಂದಾಗಿದ್ದಾರೆ.
Quarry units functioning near Karinjeshwara Temple, Hindu Jagarana Vedike to hold padayatre in Mangalore
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm