ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm