ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.
ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.
ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 07:50 pm
HK News Desk
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm