ಬ್ರೇಕಿಂಗ್ ನ್ಯೂಸ್
17-02-23 02:20 pm Mangalore Correspondent ಕರಾವಳಿ
ಮಂಗಳೂರು, ಫೆ.17 : ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು ಯುವಜನತೆಗೆ ಮಾರ್ಗದರ್ಶಕರಾಗಿ ಇರಬೇಕಾದವರು ಕೋಮು ಭಾವನೆ ಕೆರಳಿಸುವ ಕೆಟ್ಟ ಮನೋಸ್ಥಿತಿಗೆ ನಾಂದಿ ಹಾಡಿರುವುದು ಇಡೀ ರಾಜ್ಯಕ್ಕೆ ಮಾರಕ. ಇದು ಸಿದ್ದರಾಮಯ್ಯ ಅವರನ್ನು ನಿರ್ಭೀತಿಯಿಂದ ಕೆಲಸ ಮಾಡದಂತೆ ತಡೆಯುವ ಮತ್ತು ಜನರಿಗೆ ಅಪರಾಧ ಮಾಡಲು ಪ್ರಚೋದನೆ ನೀಡುವ ಹೇಯ ಕೃತ್ಯವಾಗಿದೆ ಎಂದು ಹೇಳಿದರು.

ಇಂಥವರಿಗೆ ಸಚಿವರಾಗಿ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ. ಕೂಡಲೇ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಐವಾನ್ ಡಿಸೋಜ ಹೇಳಿದರು. ಟಿಪ್ಪು ಪಾಠ ಪಠ್ಯದಲ್ಲಿದ್ದು, ಬ್ರಿಟಿಷರ ವಿರುದ್ಧದ ಹೋರಾಟ ಬಗ್ಗೆ ನಾವೆಲ್ಲ ಓದಿದ್ದೇವೆ. ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿರುವ ಜಗದೀಶ್ ಶೆಟ್ಟರ್, ಟಿಪ್ಪು ವೇಷ ಭೂಷಣ ಧರಿಸಿದ್ದ ಯಡಿಯೂರಪ್ಪ ಅವರಿಗೂ ನಿಮ್ಮ ಬಹಿರಂಗ ಹೇಳಿಕೆ ಇದು ಅನ್ವಯಿಸುತ್ತಾ.. ಅವರನ್ನು ಹೊಡೆದು ಹಾಕಲು ಕರೆ ಕೊಡುತ್ತೀರಾ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಬದ್ಧತೆ ಇರುವುದಾದರೆ, ಕೊಲೆಗೆ ಪ್ರಚೋದನೆ ನೀಡಿರುವ
ಅಶ್ವತ್ಥನಾರಾಯಣ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಬೇಕು. ಸಚಿವ ಸಂಪುಟದಿಂದ ಕಿತ್ತು ಹಾಕಬೇಕು. ನಾವು ಈಗಾಗಲೇ ಪೊಲೀಸ್ ಕಮೀಷನರ್ಗೆ ದೂರು ನೀಡಿದ್ದು, ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಬೇಕು. ಇದನ್ನು ಮಾಡದಿದ್ದರೆ, ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರಾದ ಕೋಡಿಜಾಲ್ ಇಬ್ರಾಹಿಂ, ಅಪ್ಪಿ, ಸಬಿತಾ ಮಿಸ್ಕಿತ್, ಪ್ರಕಾಶ್ ಸಾಲ್ಯಾನ್, ಭಾಸ್ಕರ ರಾವ್ ಮತ್ತಿರರಿದ್ದರು.
Bjp Ashwath Narayan comment on Siddaramaiah, Ivan dsouza in Mangalore says throw ashwath out of cabinet.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm