ಬ್ರೇಕಿಂಗ್ ನ್ಯೂಸ್
20-02-23 05:34 pm Mangalore Correspondent ಕರಾವಳಿ
ಉಳ್ಳಾಲ, ಫೆ.20 : ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಅಸಹಜವಾಗಿ ಮೃತಪಟ್ಟು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರು ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಇಂದು ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಳಗೆ ಅಡುಗೆ ಕೋಣೆಯ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕೆಳಗೆ ಬಿದ್ದು ತಲೆಗೆ ಗಾಯಗೊಂಡು ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶವ ಪೂರ್ತಿ ಕೊಳೆತಿದ್ದು ಹುಳ ಉಂಟಾಗಿದೆ. ಇದರಿಂದ ಸಾವು ಸಂಭವಿಸಿ ಮೂರ್ನಾಲ್ಕು ದಿನ ಕಳೆದಿರುವಂತೆ ಕಂಡಿದೆ.
ಸ್ಥಳೀಯರ ಜೊತೆಗೆ ಹೆಚ್ಚು ಮಾತನಾಡದೇ ಒಬ್ಬಂಟಿಯಾಗಿರುತ್ತಿದ್ದರು. ಮೂರು ಎಕರೆ ವ್ಯಾಪ್ತಿಯ ಜಾಗದ ಮಧ್ಯೆ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿದ್ದರೂ ತಾಯಿ ಜೊತೆಗೆ ಇರುತ್ತಿರಲಿಲ್ಲ. ಅಪರೂಪಕ್ಕೆ ಮಾತನಾಡುವಾಗ ಗುಳಿಗ ದೈವದ ವಿಚಾರವನ್ನೇ ಮಗ್ಗಿ ಮೊಂತೇರೋ ಮಾತನಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಳಿಗ ದೈವದ ಬಗ್ಗೆ ನಂಬಿಕೆ ಹೊಂದಿದ್ದರೋ, ಮಾನಸಿಕ ಭ್ರಾಂತಿಯಿಂದ ಹಾಗೆ ವರ್ತಿಸುತ್ತಿದ್ದರೋ ಗೊತ್ತಿಲ್ಲ ಎನ್ನುತ್ತಾರೆ, ಸ್ಥಳೀಯರು. ಅವರ ಪತಿ ಹತ್ತು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಮಕ್ಕಳು ದೂರವುಳಿದ ನಂತರ ಒಂಟಿಯಾಗಿದ್ದರು. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
The mortal remains of a home alone woman were found in a decomposed state in the kitchen of her house at Deradka near Harekala on the outskirts of the city. The deceased is identified as Maggi Monteiro (62), wife of Jeeni D’Souza, a resident of Deradka, Harekala.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm