ಬ್ರೇಕಿಂಗ್ ನ್ಯೂಸ್
20-02-23 05:34 pm Mangalore Correspondent ಕರಾವಳಿ
ಉಳ್ಳಾಲ, ಫೆ.20 : ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಅಸಹಜವಾಗಿ ಮೃತಪಟ್ಟು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರು ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಇಂದು ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಳಗೆ ಅಡುಗೆ ಕೋಣೆಯ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕೆಳಗೆ ಬಿದ್ದು ತಲೆಗೆ ಗಾಯಗೊಂಡು ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶವ ಪೂರ್ತಿ ಕೊಳೆತಿದ್ದು ಹುಳ ಉಂಟಾಗಿದೆ. ಇದರಿಂದ ಸಾವು ಸಂಭವಿಸಿ ಮೂರ್ನಾಲ್ಕು ದಿನ ಕಳೆದಿರುವಂತೆ ಕಂಡಿದೆ.
ಸ್ಥಳೀಯರ ಜೊತೆಗೆ ಹೆಚ್ಚು ಮಾತನಾಡದೇ ಒಬ್ಬಂಟಿಯಾಗಿರುತ್ತಿದ್ದರು. ಮೂರು ಎಕರೆ ವ್ಯಾಪ್ತಿಯ ಜಾಗದ ಮಧ್ಯೆ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿದ್ದರೂ ತಾಯಿ ಜೊತೆಗೆ ಇರುತ್ತಿರಲಿಲ್ಲ. ಅಪರೂಪಕ್ಕೆ ಮಾತನಾಡುವಾಗ ಗುಳಿಗ ದೈವದ ವಿಚಾರವನ್ನೇ ಮಗ್ಗಿ ಮೊಂತೇರೋ ಮಾತನಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಳಿಗ ದೈವದ ಬಗ್ಗೆ ನಂಬಿಕೆ ಹೊಂದಿದ್ದರೋ, ಮಾನಸಿಕ ಭ್ರಾಂತಿಯಿಂದ ಹಾಗೆ ವರ್ತಿಸುತ್ತಿದ್ದರೋ ಗೊತ್ತಿಲ್ಲ ಎನ್ನುತ್ತಾರೆ, ಸ್ಥಳೀಯರು. ಅವರ ಪತಿ ಹತ್ತು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಮಕ್ಕಳು ದೂರವುಳಿದ ನಂತರ ಒಂಟಿಯಾಗಿದ್ದರು. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
The mortal remains of a home alone woman were found in a decomposed state in the kitchen of her house at Deradka near Harekala on the outskirts of the city. The deceased is identified as Maggi Monteiro (62), wife of Jeeni D’Souza, a resident of Deradka, Harekala.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm