ಬ್ರೇಕಿಂಗ್ ನ್ಯೂಸ್
21-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಗೆ ಬಂಟ್ವಾಳ ನಗರ, ಗ್ರಾಮಾಂತರ ಮತ್ತು ಬೆಳ್ತಂಗಡಿ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ನಿನ್ನೆ ರಾತ್ರಿ 9ರಿಂದ 12 ಗಂಟೆ ಮಧ್ಯೆ ಘಟನೆ ನಡೆದಿರುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ ಫ್ಲಾಟ್ ನಲ್ಲಿ ವಾಸನೆ ಬರುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ, ಇಲ್ಲಿ ಬಂದು ಪರಿಶೀಲನೆ ನಡೆಸಿದ್ದೇವೆ. ಮನೆಯ ಡೋರ್ ಲಾಕ್ ಆಗಿತ್ತು. ಕಿಟಕಿಯಲ್ಲಿ ನೋಡಿದಾಗ, ಮನೆಯೊಳಗೆ ರಕ್ತದ ಕಲೆಗಳು ಕಂಡುಬಂದಿದ್ದವು. ಹೀಗಾಗಿ ಬಾಗಿಲು ಒಡೆದು ನೋಡಿದಾಗ ಸುರೇಂದ್ರ ಬಂಟ್ವಾಳ್ ಹತ್ಯೆಯಾಗಿದ್ದು ಕಂಡುಬಂದಿದೆ. ದೇಹದಲ್ಲಿ ಹಲವು ಇರಿತದ ಗಾಯಗಳಿದ್ದವು ಎಂದು ಎಸ್ಪಿ ತಿಳಿಸಿದ್ದಾರೆ.
ಫ್ಲಾಟ್ ಅನ್ನು ಸ್ವಂತಕ್ಕೆ ಖರೀದಿಸಿದ್ದರು. ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು. ಸುರೇಂದ್ರ ಜೊತೆಗೆ ಒಬ್ಬ ಫ್ರೆಂಡ್ ಇದ್ದ ಎನ್ನುವ ಮಾಹಿತಿ ಸಿಕ್ಕಿದೆ, ಅದರ ಬಗ್ಗೆ ತನಿಖೆ ಮಾಡುತ್ತೇವೆ. ಸ್ಥಳದಲ್ಲಿ ಸಾಕ್ಷಿಗಳನ್ನು ಸಂಗ್ರಹಿಸಿದ್ದೇವೆ. ಅವರು ಎಲ್ಲೆಲ್ಲಿ ಬಿಸಿನೆಸ್ ಹೊಂದಿದ್ದರು, ಅದನ್ನೂ ಪರಿಶೀಲನೆ ನಡೆಸುತ್ತಿದ್ದೇವೆ. ಶಂಕೆ ಕಂಡುಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಖಾಸಾ ದೋಸ್ತ್ ಹಂತಕನಾದನೇ ?
ಸುರೇಂದ್ರ ಬಂಟ್ವಾಳ್, ಭಂಡಾರಿಬೆಟ್ಟಿನ ಫ್ಲಾಟಿನಲ್ಲಿ ಹೆಚ್ಚಾಗಿ ಒಬ್ಬರೇ ಇರುತ್ತಿದ್ದರು. ಕೆಲವೊಮ್ಮೆ ಗೆಳೆಯ ಸತೀಶ್ ಕುಮಾರ್ ಎನ್ನುವಾತ ಫ್ಲಾಟಿಗೆ ಬರುತ್ತಿದ್ದ. ನಿನ್ನೆ ರಾತ್ರಿಯೂ ಸುರೇಂದ್ರ 9.30ರ ಸುಮಾರಿಗೆ ಫ್ಲಾಟಿಗೆ ಬಂದಿದ್ದು, ಜೊತೆಗೆ ಸತೀಶ್ ಕುಮಾರ್ ಕೂಡ ಇದ್ದ ಎನ್ನುವ ಮಾಹಿತಿ ಸಿಕ್ಕಿದೆ. ಆದರೆ, ತಡರಾತ್ರಿ ಸತೀಶ್ ಮತ್ತು ಆತನ ಜೊತೆಗೆ ಇನ್ನೊಬ್ಬ ಫ್ಲಾಟಿನಿಂದ ತೆರಳಿದ್ದರು ಎನ್ನಲಾಗುತ್ತಿದೆ. ಸುರೇಂದ್ರ ಬಂಟ್ವಾಳ್ ಹತ್ಯೆಯ ವಿಚಾರ ಗೊತ್ತಾದ ಬಳಿಕ ಸತೀಶ್ ಕುಮಾರ್ ಫೋನ್ ಸ್ವಿಚ್ ಆಫ್ ಆಗಿದ್ದು ಆತನ ಮೇಲೆ ಸಂಶಯ ಹೆಚ್ಚುವಂತೆ ಮಾಡಿದೆ. 2018ರಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ತಲವಾರು ಜಳಪಿಸಿದ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಜೊತೆಗೆ ಸತೀಶ್ ಕುಮಾರ್ ಕೂಡ ಇದ್ದ. ಪ್ರಕರಣದ ಬಳಿಕ ಎಸ್ಕೇಪ್ ಆಗಿ ಕಾಸರಗೋಡಿನ ಕುಂಬ್ಲೆಯಲ್ಲಿ ಅಡಗಿಕೊಂಡಿದ್ದ ಸುರೇಂದ್ರ ಮತ್ತು ಸತೀಶ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಈಗ ಈತನೇ ತಿರುಗಿ ಬಿದ್ದನೇ ಅಥವಾ ಯಾರಾದ್ರೂ ಸುಪಾರಿ ಕೊಟ್ಟು ಕೊಲ್ಲಿಸಿದ್ದಾರೆಯೇ ಅನ್ನುವ ಅನುಮಾನ ದಟ್ಟವಾಗಿದೆ.
Crime Report Video:
Three Special teams have been formed to nab the gang that has brutally killed Surendra Bantwal said Dakshina Kannada SP B.M. Laxmi Prasad. A close aide of Surendra is missing he also added.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm