ಬ್ರೇಕಿಂಗ್ ನ್ಯೂಸ್
21-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಗೆ ಬಂಟ್ವಾಳ ನಗರ, ಗ್ರಾಮಾಂತರ ಮತ್ತು ಬೆಳ್ತಂಗಡಿ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ನಿನ್ನೆ ರಾತ್ರಿ 9ರಿಂದ 12 ಗಂಟೆ ಮಧ್ಯೆ ಘಟನೆ ನಡೆದಿರುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ ಫ್ಲಾಟ್ ನಲ್ಲಿ ವಾಸನೆ ಬರುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ, ಇಲ್ಲಿ ಬಂದು ಪರಿಶೀಲನೆ ನಡೆಸಿದ್ದೇವೆ. ಮನೆಯ ಡೋರ್ ಲಾಕ್ ಆಗಿತ್ತು. ಕಿಟಕಿಯಲ್ಲಿ ನೋಡಿದಾಗ, ಮನೆಯೊಳಗೆ ರಕ್ತದ ಕಲೆಗಳು ಕಂಡುಬಂದಿದ್ದವು. ಹೀಗಾಗಿ ಬಾಗಿಲು ಒಡೆದು ನೋಡಿದಾಗ ಸುರೇಂದ್ರ ಬಂಟ್ವಾಳ್ ಹತ್ಯೆಯಾಗಿದ್ದು ಕಂಡುಬಂದಿದೆ. ದೇಹದಲ್ಲಿ ಹಲವು ಇರಿತದ ಗಾಯಗಳಿದ್ದವು ಎಂದು ಎಸ್ಪಿ ತಿಳಿಸಿದ್ದಾರೆ.



ಫ್ಲಾಟ್ ಅನ್ನು ಸ್ವಂತಕ್ಕೆ ಖರೀದಿಸಿದ್ದರು. ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು. ಸುರೇಂದ್ರ ಜೊತೆಗೆ ಒಬ್ಬ ಫ್ರೆಂಡ್ ಇದ್ದ ಎನ್ನುವ ಮಾಹಿತಿ ಸಿಕ್ಕಿದೆ, ಅದರ ಬಗ್ಗೆ ತನಿಖೆ ಮಾಡುತ್ತೇವೆ. ಸ್ಥಳದಲ್ಲಿ ಸಾಕ್ಷಿಗಳನ್ನು ಸಂಗ್ರಹಿಸಿದ್ದೇವೆ. ಅವರು ಎಲ್ಲೆಲ್ಲಿ ಬಿಸಿನೆಸ್ ಹೊಂದಿದ್ದರು, ಅದನ್ನೂ ಪರಿಶೀಲನೆ ನಡೆಸುತ್ತಿದ್ದೇವೆ. ಶಂಕೆ ಕಂಡುಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಖಾಸಾ ದೋಸ್ತ್ ಹಂತಕನಾದನೇ ?
ಸುರೇಂದ್ರ ಬಂಟ್ವಾಳ್, ಭಂಡಾರಿಬೆಟ್ಟಿನ ಫ್ಲಾಟಿನಲ್ಲಿ ಹೆಚ್ಚಾಗಿ ಒಬ್ಬರೇ ಇರುತ್ತಿದ್ದರು. ಕೆಲವೊಮ್ಮೆ ಗೆಳೆಯ ಸತೀಶ್ ಕುಮಾರ್ ಎನ್ನುವಾತ ಫ್ಲಾಟಿಗೆ ಬರುತ್ತಿದ್ದ. ನಿನ್ನೆ ರಾತ್ರಿಯೂ ಸುರೇಂದ್ರ 9.30ರ ಸುಮಾರಿಗೆ ಫ್ಲಾಟಿಗೆ ಬಂದಿದ್ದು, ಜೊತೆಗೆ ಸತೀಶ್ ಕುಮಾರ್ ಕೂಡ ಇದ್ದ ಎನ್ನುವ ಮಾಹಿತಿ ಸಿಕ್ಕಿದೆ. ಆದರೆ, ತಡರಾತ್ರಿ ಸತೀಶ್ ಮತ್ತು ಆತನ ಜೊತೆಗೆ ಇನ್ನೊಬ್ಬ ಫ್ಲಾಟಿನಿಂದ ತೆರಳಿದ್ದರು ಎನ್ನಲಾಗುತ್ತಿದೆ. ಸುರೇಂದ್ರ ಬಂಟ್ವಾಳ್ ಹತ್ಯೆಯ ವಿಚಾರ ಗೊತ್ತಾದ ಬಳಿಕ ಸತೀಶ್ ಕುಮಾರ್ ಫೋನ್ ಸ್ವಿಚ್ ಆಫ್ ಆಗಿದ್ದು ಆತನ ಮೇಲೆ ಸಂಶಯ ಹೆಚ್ಚುವಂತೆ ಮಾಡಿದೆ. 2018ರಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ತಲವಾರು ಜಳಪಿಸಿದ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಜೊತೆಗೆ ಸತೀಶ್ ಕುಮಾರ್ ಕೂಡ ಇದ್ದ. ಪ್ರಕರಣದ ಬಳಿಕ ಎಸ್ಕೇಪ್ ಆಗಿ ಕಾಸರಗೋಡಿನ ಕುಂಬ್ಲೆಯಲ್ಲಿ ಅಡಗಿಕೊಂಡಿದ್ದ ಸುರೇಂದ್ರ ಮತ್ತು ಸತೀಶ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಈಗ ಈತನೇ ತಿರುಗಿ ಬಿದ್ದನೇ ಅಥವಾ ಯಾರಾದ್ರೂ ಸುಪಾರಿ ಕೊಟ್ಟು ಕೊಲ್ಲಿಸಿದ್ದಾರೆಯೇ ಅನ್ನುವ ಅನುಮಾನ ದಟ್ಟವಾಗಿದೆ.
Crime Report Video:
Three Special teams have been formed to nab the gang that has brutally killed Surendra Bantwal said Dakshina Kannada SP B.M. Laxmi Prasad. A close aide of Surendra is missing he also added.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm