ಬ್ರೇಕಿಂಗ್ ನ್ಯೂಸ್
21-02-23 03:38 pm Mangalore Correspondent ಕರಾವಳಿ
ಉಳ್ಳಾಲ, ಫೆ.21 : ಉಳ್ಳಾಲ ನಗರಸಭೆಯ 2023- 24ನೇ ಸಾಲಿನ ಬಜೆಟ್ ಇಂದು ಮಂಡನೆಯಾಗಿದ್ದು ಬಜೆಟನ್ನ ವಿರೋಧಿಸಿದ ಜೆಡಿಎಸ್ ಕೌನ್ಸಿಲರ್ ಗಳು ಕಿವಿಗೆ ಹೂವಿಟ್ಟು ಆಡಳಿತಾರೂಢ ಕಾಂಗ್ರೆಸ್ ನಾಯಕರನ್ನು ಅಣಕಿಸಿದ್ದಾರೆ.
ಇತ್ತೀಚೆಗೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು. ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತಾರೂಢ ಕಾಂಗ್ರೆಸನ್ನ ಅಣಕಿಸಿದ್ದಾರೆ.




ಮಂಗಳವಾರ ಉಳ್ಳಾಲ ನಗರಸಭೆ ಆಡಳಿತ ಸೌಧದಲ್ಲಿ ಬಜೆಟ್ ಮಂಡನೆ ವೇಳೆ ಜೆಡಿಎಸ್ ಸದಸ್ಯರಾದ ದಿನಕರ ಉಳ್ಳಾಲ್, ಅಬ್ದುಲ್ ಬಶೀರ್, ಖಲೀಲ್, ಜಬ್ಬಾರ್, ಮುಶ್ತಾಕ್ ಪಟ್ಲ ಅವರು ಕಿವಿಗೆ ಹೂವಿಟ್ಟು ಬಜೆಟ್ ಬಗ್ಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ವೇಳೆ ಬಿಜೆಪಿ ನಾಮನಿರ್ದೇಶಿತ ಸದಸ್ಯ ಬಾಬು ಬಂಗೇರ ಮಾತನಾಡಿ, ಜೆಡಿಎಸ್ ನವರು ಬಜೆಟ್ ಬಗ್ಗೆ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ನಾವು ಬಜೆಟ್ ವಿಚಾರದಲ್ಲಿ ತಟಸ್ಥ ಎಂದಾಕ್ಷಣ ಸಭೆಯ ವೇದಿಕೆಯಲ್ಲಿದ್ದ ನಗರಸಭೆ ಉಪಾಧ್ಯಕ್ಷ ಆಯುಬ್ ಮಂಚಿಲ ಟೇಬಲನ್ನ ಬಡಿದು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್ ಹಿರಿಯ ಸದಸ್ಯ ದಿನಕರ್ ಉಳ್ಳಾಲ್ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ಹೊಂದಾಣಿಕೆಯ ರಾಜಕೀಯ ನಡೆಸುತ್ತಿದ್ದು ನೀವಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳೆಂದು ಆಕ್ಷೇಪಿಸಿದ್ದಾರೆ. ಮತ್ತೆ ಸದನದಲ್ಲಿ ಆಡಳಿತ ವಿರೋಧ ಪಕ್ಷಗಳ ನಡುವೆ ಗದ್ದಲ ಎಬ್ಬಿದ್ದು ಸಭಾದ್ಯಕ್ಷತೆ ವಹಿಸಿದ್ದ ನಗರ ಸಭೆ ಅಧ್ಯಕ್ಷೆ ಚಿತ್ರಕಲಾ ಅವರು ಗದ್ದಲ, ಗಲಾಟೆ ಮಧ್ಯೆಯೇ ರಾಷ್ಟ್ರಗೀತೆ ಹಾಡುವುದರೊಂದಿಗೆ ಸಭೆಯನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.



ಎಸ್ ಡಿಪಿಐ ಸದಸ್ಯ ಅಝ್ಗರ್ ಆಲಿ ನಗರಸಭೆ ಪ್ರಬಂಧಕರಲ್ಲಿ ಅಜೆಂಡಾದಲ್ಲಿ ಸಭೆ ಸಂಪೂರ್ಣಗೊಂಡಿಲ್ಲವೆಂದು ದಾಖಲಿಸಲು ಸೂಚಿಸಿದ್ದಾರೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಕಾಂಗ್ರೆಸ್ ನಗರ ಸದಸ್ಯರಾದ ಭಾರತಿ ಮತ್ತು ವೀಣಾ ಶಾಂತಿ ಡಿಸೋಜ ಪ್ರಬಂಧಕರಲ್ಲಿ ಅಝ್ಗರ್ ವಿರುದ್ಧ ಪೊಲೀಸ್ ದೂರು ನೀಡುವಂತೆ ಹೇಳಿದ್ದು ಇದರಿಂದ ಕೆರಳಿದ ಅಝ್ಗರ್ ಕೈ ಸದಸ್ಯೆಯರ ವಿರುದ್ಧ ಗಲಾಟೆ ನಡೆಸಿದ್ದು ಮಾತಿನ ಚಕಮಕಿ, ತಳ್ಳಾಟ ನಡೆಸಿದ್ದಾರೆ.
Mangalore JDS leaders with flowers on ear during Ullal municipality Budget, slam Congress leaders by pushing and fighting.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm