ಬ್ರೇಕಿಂಗ್ ನ್ಯೂಸ್
21-02-23 10:06 pm Mangalore Correspondent ಕರಾವಳಿ
ಮಂಗಳೂರು, ಫೆ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹೊರತುಪಡಿಸಿ ಉಳಿದ ಏಳು ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬಿಲ್ಲವರ ಮತಗಳೇ ನಿರ್ಣಾಯಕ. ಹಾಗಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ ಮೂರು ಸೀಟುಗಳನ್ನು ಬಿಲ್ಲವರಿಗೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರ ಬಳಿಗೆ ನಿಯೋಗ ಹೋಗಿದ್ದೇವೆ. ಮೂರು ಸೀಟು ನೀಡಬೇಕೆಂದು ನಾವು ಮಾಧ್ಯಮದ ಮೂಲಕ ಒತ್ತಾಯ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಲ್ಲವ ಮುಖಂಡರು ಒತ್ತಾಯಿಸಿದ್ದಾರೆ.
ಗೆಜ್ಜೆಗಿರಿ ಕ್ಷೇತ್ರ ಸಮಿತಿಯಲ್ಲಿ ಗುರುತಿಸಿರುವ ಉಲ್ಲಾಸ್ ಕೋಟ್ಯಾನ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಿಲ್ಲವರಿಗೆ ಸೀಟು ಕೊಡಬೇಕೆಂದು ಒತ್ತಾಯ ಮಾಡುತ್ತೇವೆ. ಈಗಾಗಲೇ ಈ ಬಗ್ಗೆ ನಾವು ನಿಯೋಗ ತೆರಳಿ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿದ್ದೇವೆ. ಪಕ್ಷದಲ್ಲಿ ಗುರುತಿಸಿರುವ ನಮ್ಮ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಇದೆ. ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಿದಲ್ಲಿ ಅವರನ್ನು ಗೆಲ್ಲಿಸಲು ಶಕ್ತಿ ಮೀರಿದ ಪ್ರಯತ್ನವನ್ನು ಸಮುದಾಯದ ವತಿಯಿಂದ ಮಾಡುತ್ತೇವೆ ಎಂದು ಹೇಳಿದರು.
ಈ ಹಿಂದೆ ಜನಾರ್ದನ ಪೂಜಾರಿಯವರಿಗೆ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಬಿಲ್ಲವರನ್ನು ಪ್ರತಿನಿಧಿಸುವ ಜನಾರ್ದನ ಪೂಜಾರಿ ಇದ್ದರು. ಕಳೆದ ಬಾರಿ ಅದನ್ನು ಬೇರೆಯವರಿಗೆ ನೀಡಲಾಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಬ್ಬರಿಗೆ ಮಾತ್ರ ಬಿಲ್ಲವರಿಗೆ ಅವಕಾಶ ನೀಡಲಾಗಿತ್ತು. ಹಾಗಾಗಿ ಈ ಬಾರಿ ಚುನಾವಣೆಗೆ ಮೊದಲೇ ಆಗ್ರಹ ಮಾಡುತ್ತಿದ್ದೇವೆ ಎಂದು ಹೇಳಿದರು.

ನೀವು ಕಾಂಗ್ರೆಸ್ ಮೇಲೆ ಮಾತ್ರ ಒತ್ತಾಯ ಮಾಡುತ್ತೀರಿ ಯಾಕೆ, ಬಿಜೆಪಿ ಮೇಲೆ ಮಾಡಲ್ವಾ ಎಂದು ಕೇಳಿದ್ದಕ್ಕೆ, ನಾವು ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಮನವಿ ನೀಡಿದ್ದೇವೆ. ನಾವು ಕಾಂಗ್ರೆಸ್ ಪಕ್ಷದಲ್ಲಿ ಪದಾಧಿಕಾರಿ ಆಗಿರುವುದರಿಂದ ಬಿಜೆಪಿ ಬಗ್ಗೆ ಮಾತನಾಡುವುದಿಲ್ಲ. ಅವರು ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕೊಡಬೇಕು ಎಂದು ಆಗ್ರಹ ಮಾಡುತ್ತೇವೆ. ಇಂಥ ಕ್ಷೇತ್ರ ಎಂಬುದನ್ನೂ ಹೇಳುವುದಿಲ್ಲ. ಯಾವುದಾದ್ರೂ ಮೂರು ಕ್ಷೇತ್ರದಲ್ಲಿ ಸೀಟು ಕೊಡಬೇಕೆಂದು ಹೇಳುತ್ತೇವೆ ಎಂದರು. ಸೀಟು ಕೊಡದೇ ಇದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ, ನಾವು ಈ ಬಗ್ಗೆ ಮಾಧ್ಯಮದಲ್ಲಿ ಹೇಳಲು ಆಗುವುದಿಲ್ಲ ಎಂದರು.
ಧನಂಜಯ ಮಟ್ಟು ಮೂಲ್ಕಿ, ಯೋಗೀಶ್ ಕುಮಾರ್ ಬೆಳ್ತಂಗಡಿ, ಗಣೇಶ್ ಪೂಜಾರಿ ಗುರುಪುರ ಇದ್ದರು.
Three seats must be given to the Billava community in Mangalore for the coming election requests Congress Billava leaders.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm