ಬ್ರೇಕಿಂಗ್ ನ್ಯೂಸ್
22-10-20 10:41 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 22: ನವರಾತ್ರಿ ವೇಳೆ ಉಪವಾಸ ವ್ರತ ಮಾಡೋದು, ದೇವಸ್ಥಾನಕ್ಕೆ ತೆರಳಿ ಹೋಮ ಹವನಗಳನ್ನು ಸಲ್ಲಿಸೋದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬರು ತಮಿಳುನಾಡು ಮೂಲದ ಭಕ್ತ ವಿಶಿಷ್ಟ ರೀತಿಯಲ್ಲಿ ನವರಾತ್ರಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಸಿದ್ಧ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಮಿಳುನಾಡು ಮೂಲದ ರಾಜಶೇಖರ ಎಂಬವರು ದೇವಸ್ಥಾನದಲ್ಲಿ ಭಕ್ತರು ಊಟ ಮಾಡಿದ ಎಲೆಯನ್ನು ಎತ್ತುವುದು ಹಾಗೂ ಭಕ್ತರಿಗೆ ನೀರು, ದೇಗುಲದಲ್ಲಿ ಚಾಕರಿ ಮಾಡುವ ಕೆಲಸದಲ್ಲಿ ತೊಡಗಿಸಿದ್ದಾರೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹೀಗೂ ಒಂದು ರೀತಿಯ ಅರ್ಪಣಾ ಭಾವದ ಸೇವೆಯನ್ನು ನಡೆಸುತ್ತಿರುವುದು ಗಮನ ಸೆಳೆದಿದೆ.

ರಾಜಶೇಖರ್ ತಮಿಳುನಾಡಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದು, ಪ್ರತಿವರ್ಷ ನವರಾತ್ರಿಗೆ ತಾಯಿ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇಗುಲಕ್ಕೆ ಆಗಮಿಸುತ್ತಾರೆ. ಕಳೆದ ಮೂರು ವರ್ಷಗಳಿಂದ ಚಾಕರಿ ಕೆಲಸ ಮಾಡುವ ಮೂಲಕ ದೇವಿಯ ಸೇವೆ ನೆರವೇರಿಸುತ್ತಾರೆ. ದೇವಸ್ಥಾನದ ಧರ್ಮದರ್ಶಿ ಸಚ್ಚಿದಾನಂದ ಚಾತ್ರಾ ಹೇಳುವ ಪ್ರಕಾರ, ದೇವಿಗೆ ಭಕ್ತರು ಬಂದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಥರಾವರಿ ಸೇವೆಗಳನ್ನು ಸಲ್ಲಿಸುತ್ತಾರೆ. ತಮಿಳುನಾಡು ಮೂಲದ ವ್ಯಕ್ತಿಯ ಸೇವೆ ಬಹಳ ವಿಶಿಷ್ಟವಾಗಿ ಕಾಣುತ್ತಿದೆ. ದೇವರ ಮುಂದೆ ಭಕ್ತರೆಲ್ಲ ಸಮಾನರು ಎಂದು ಅವರು ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ.
ಹಿಂದೆ ಕೊಲ್ಲೂರಿಗೆ ಬಂದಿದ್ದಾಗ, ಕಮಲಶಿಲೆ ದೇವಸ್ಥಾನದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದೇವಸ್ಥಾನಕ್ಕೆ ಭೇಟಿ ಕೊಟ್ಟ ನಂತರ ಮನಸ್ಸಿಗೆ ಬಹಳ ಸಂತೋಷವಾಗಿದೆ. ನವರಾತ್ರಿ ಸಂದರ್ಭದಲ್ಲಿ ಮೂರು ವರ್ಷಗಳಿಂದ ದೇವಸ್ಥಾನಕ್ಕೆ ಬರುತ್ತಿದ್ದು ಹತ್ತು ದಿನ ಇಲ್ಲೇ ಇದ್ದು ಚಾಕರಿ ಕೆಲಸಗಳನ್ನು ಮಾಡುತ್ತಿದ್ದೇನೆ. ಯಾವುದೇ ಹರಕೆ ಹೊತ್ತು ಈ ಕೆಲಸ ಮಾಡುತ್ತಿಲ್ಲ. ನನ್ನ ಮನ ಸಂತೋಷಕ್ಕಾಗಿ ದೇವರ ಸೇವೆ ನಡೆಸುತ್ತಿದ್ದೇನೆ ಎಂದು ರಾಜಶೇಖರ್ ಹೇಳುತ್ತಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm