ಬ್ರೇಕಿಂಗ್ ನ್ಯೂಸ್
22-10-20 10:41 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 22: ನವರಾತ್ರಿ ವೇಳೆ ಉಪವಾಸ ವ್ರತ ಮಾಡೋದು, ದೇವಸ್ಥಾನಕ್ಕೆ ತೆರಳಿ ಹೋಮ ಹವನಗಳನ್ನು ಸಲ್ಲಿಸೋದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬರು ತಮಿಳುನಾಡು ಮೂಲದ ಭಕ್ತ ವಿಶಿಷ್ಟ ರೀತಿಯಲ್ಲಿ ನವರಾತ್ರಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಸಿದ್ಧ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಮಿಳುನಾಡು ಮೂಲದ ರಾಜಶೇಖರ ಎಂಬವರು ದೇವಸ್ಥಾನದಲ್ಲಿ ಭಕ್ತರು ಊಟ ಮಾಡಿದ ಎಲೆಯನ್ನು ಎತ್ತುವುದು ಹಾಗೂ ಭಕ್ತರಿಗೆ ನೀರು, ದೇಗುಲದಲ್ಲಿ ಚಾಕರಿ ಮಾಡುವ ಕೆಲಸದಲ್ಲಿ ತೊಡಗಿಸಿದ್ದಾರೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹೀಗೂ ಒಂದು ರೀತಿಯ ಅರ್ಪಣಾ ಭಾವದ ಸೇವೆಯನ್ನು ನಡೆಸುತ್ತಿರುವುದು ಗಮನ ಸೆಳೆದಿದೆ.
ರಾಜಶೇಖರ್ ತಮಿಳುನಾಡಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದು, ಪ್ರತಿವರ್ಷ ನವರಾತ್ರಿಗೆ ತಾಯಿ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇಗುಲಕ್ಕೆ ಆಗಮಿಸುತ್ತಾರೆ. ಕಳೆದ ಮೂರು ವರ್ಷಗಳಿಂದ ಚಾಕರಿ ಕೆಲಸ ಮಾಡುವ ಮೂಲಕ ದೇವಿಯ ಸೇವೆ ನೆರವೇರಿಸುತ್ತಾರೆ. ದೇವಸ್ಥಾನದ ಧರ್ಮದರ್ಶಿ ಸಚ್ಚಿದಾನಂದ ಚಾತ್ರಾ ಹೇಳುವ ಪ್ರಕಾರ, ದೇವಿಗೆ ಭಕ್ತರು ಬಂದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಥರಾವರಿ ಸೇವೆಗಳನ್ನು ಸಲ್ಲಿಸುತ್ತಾರೆ. ತಮಿಳುನಾಡು ಮೂಲದ ವ್ಯಕ್ತಿಯ ಸೇವೆ ಬಹಳ ವಿಶಿಷ್ಟವಾಗಿ ಕಾಣುತ್ತಿದೆ. ದೇವರ ಮುಂದೆ ಭಕ್ತರೆಲ್ಲ ಸಮಾನರು ಎಂದು ಅವರು ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ.
ಹಿಂದೆ ಕೊಲ್ಲೂರಿಗೆ ಬಂದಿದ್ದಾಗ, ಕಮಲಶಿಲೆ ದೇವಸ್ಥಾನದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದೇವಸ್ಥಾನಕ್ಕೆ ಭೇಟಿ ಕೊಟ್ಟ ನಂತರ ಮನಸ್ಸಿಗೆ ಬಹಳ ಸಂತೋಷವಾಗಿದೆ. ನವರಾತ್ರಿ ಸಂದರ್ಭದಲ್ಲಿ ಮೂರು ವರ್ಷಗಳಿಂದ ದೇವಸ್ಥಾನಕ್ಕೆ ಬರುತ್ತಿದ್ದು ಹತ್ತು ದಿನ ಇಲ್ಲೇ ಇದ್ದು ಚಾಕರಿ ಕೆಲಸಗಳನ್ನು ಮಾಡುತ್ತಿದ್ದೇನೆ. ಯಾವುದೇ ಹರಕೆ ಹೊತ್ತು ಈ ಕೆಲಸ ಮಾಡುತ್ತಿಲ್ಲ. ನನ್ನ ಮನ ಸಂತೋಷಕ್ಕಾಗಿ ದೇವರ ಸೇವೆ ನಡೆಸುತ್ತಿದ್ದೇನೆ ಎಂದು ರಾಜಶೇಖರ್ ಹೇಳುತ್ತಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm