ಬ್ರೇಕಿಂಗ್ ನ್ಯೂಸ್
22-10-20 10:41 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 22: ನವರಾತ್ರಿ ವೇಳೆ ಉಪವಾಸ ವ್ರತ ಮಾಡೋದು, ದೇವಸ್ಥಾನಕ್ಕೆ ತೆರಳಿ ಹೋಮ ಹವನಗಳನ್ನು ಸಲ್ಲಿಸೋದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬರು ತಮಿಳುನಾಡು ಮೂಲದ ಭಕ್ತ ವಿಶಿಷ್ಟ ರೀತಿಯಲ್ಲಿ ನವರಾತ್ರಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಸಿದ್ಧ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಮಿಳುನಾಡು ಮೂಲದ ರಾಜಶೇಖರ ಎಂಬವರು ದೇವಸ್ಥಾನದಲ್ಲಿ ಭಕ್ತರು ಊಟ ಮಾಡಿದ ಎಲೆಯನ್ನು ಎತ್ತುವುದು ಹಾಗೂ ಭಕ್ತರಿಗೆ ನೀರು, ದೇಗುಲದಲ್ಲಿ ಚಾಕರಿ ಮಾಡುವ ಕೆಲಸದಲ್ಲಿ ತೊಡಗಿಸಿದ್ದಾರೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹೀಗೂ ಒಂದು ರೀತಿಯ ಅರ್ಪಣಾ ಭಾವದ ಸೇವೆಯನ್ನು ನಡೆಸುತ್ತಿರುವುದು ಗಮನ ಸೆಳೆದಿದೆ.

ರಾಜಶೇಖರ್ ತಮಿಳುನಾಡಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದು, ಪ್ರತಿವರ್ಷ ನವರಾತ್ರಿಗೆ ತಾಯಿ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇಗುಲಕ್ಕೆ ಆಗಮಿಸುತ್ತಾರೆ. ಕಳೆದ ಮೂರು ವರ್ಷಗಳಿಂದ ಚಾಕರಿ ಕೆಲಸ ಮಾಡುವ ಮೂಲಕ ದೇವಿಯ ಸೇವೆ ನೆರವೇರಿಸುತ್ತಾರೆ. ದೇವಸ್ಥಾನದ ಧರ್ಮದರ್ಶಿ ಸಚ್ಚಿದಾನಂದ ಚಾತ್ರಾ ಹೇಳುವ ಪ್ರಕಾರ, ದೇವಿಗೆ ಭಕ್ತರು ಬಂದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಥರಾವರಿ ಸೇವೆಗಳನ್ನು ಸಲ್ಲಿಸುತ್ತಾರೆ. ತಮಿಳುನಾಡು ಮೂಲದ ವ್ಯಕ್ತಿಯ ಸೇವೆ ಬಹಳ ವಿಶಿಷ್ಟವಾಗಿ ಕಾಣುತ್ತಿದೆ. ದೇವರ ಮುಂದೆ ಭಕ್ತರೆಲ್ಲ ಸಮಾನರು ಎಂದು ಅವರು ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ.
ಹಿಂದೆ ಕೊಲ್ಲೂರಿಗೆ ಬಂದಿದ್ದಾಗ, ಕಮಲಶಿಲೆ ದೇವಸ್ಥಾನದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದೇವಸ್ಥಾನಕ್ಕೆ ಭೇಟಿ ಕೊಟ್ಟ ನಂತರ ಮನಸ್ಸಿಗೆ ಬಹಳ ಸಂತೋಷವಾಗಿದೆ. ನವರಾತ್ರಿ ಸಂದರ್ಭದಲ್ಲಿ ಮೂರು ವರ್ಷಗಳಿಂದ ದೇವಸ್ಥಾನಕ್ಕೆ ಬರುತ್ತಿದ್ದು ಹತ್ತು ದಿನ ಇಲ್ಲೇ ಇದ್ದು ಚಾಕರಿ ಕೆಲಸಗಳನ್ನು ಮಾಡುತ್ತಿದ್ದೇನೆ. ಯಾವುದೇ ಹರಕೆ ಹೊತ್ತು ಈ ಕೆಲಸ ಮಾಡುತ್ತಿಲ್ಲ. ನನ್ನ ಮನ ಸಂತೋಷಕ್ಕಾಗಿ ದೇವರ ಸೇವೆ ನಡೆಸುತ್ತಿದ್ದೇನೆ ಎಂದು ರಾಜಶೇಖರ್ ಹೇಳುತ್ತಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am