ಬ್ರೇಕಿಂಗ್ ನ್ಯೂಸ್
22-02-23 08:24 pm Mangalore Correspondent ಕರಾವಳಿ
ಮಂಗಳೂರು,ಫೆ.22: ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯಿಂದ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು 2023ನೇ ಸಾಲಿಗೆ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ 11,750 ರೂ.ಗಳಂತೆ ಖರೀದಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ.
ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು 2023ರ ಮಾರ್ಚ್ 12ರೊಳಗೆ ನೋಂದಾಯಿಸಿ ನೋಂದಣಿ ಚೀಟಿ ಪಡೆಯಬೇಕು. 2022-23ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು, ರೈತರ ಬಳಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಪ್ರೂಟ್ಸ್ ನಲ್ಲಿ ಯಾವುದಾದರೂ ಮಾಹಿತಿ ಲಭ್ಯವಿಲ್ಲದಿದ್ದಲ್ಲಿ, ತಪ್ಪಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಲು ತರುವುದು.
ಪ್ರತಿ ಎಕರೆಗೆ 6 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ನಿಗದಿತ ಅವಧಿಯೊಳಗೆ ನೋಂದಣಿಗೊಂಡ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಉಂಡೆ ಕೊಬ್ಬರಿ ಉತ್ಪನ್ನವನ್ನು 2023ರ ಜುಲೈ 27ರ ವರೆಗೆ ಬೆಳಗ್ಗೆ 8ರಿಂದ ಸಂಜೆ 6 ಗಂಟೆಯ ವರೆಗೆ ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ತಾಲೂಕು, ಖರೀದಿ ಕೇಂದ್ರ ಹಾಗೂ ಸ್ಥಳ, ಖರೀದಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವವರ ಹೆಸರು ಹಾಗೂ ಅವರ ಮೊಬೈಲ್ ಸಂಖ್ಯೆಯ ವಿವರಗಳು ಕ್ರಮವಾಗಿ ಇಂತಿವೆ:
ಮಂಗಳೂರು ತಾಲೂಕಿನ ಮಂಗಳೂರಿನ ಪದವು ಶಕ್ತಿನಗರ ಕೇಂದ್ರದ ವಿರೇಂದ್ರ ಎಸ್-9663758820, ಮೂಡಬಿದ್ರೆ ತಾಲೂಕಿನ ಮೂಡಬಿದ್ರೆಯ ಅಲಂಗಾರು ಕೇಂದ್ರದ ಚೇತನ್ ನಾಯಕ್ ಎಂ.ಎಸ್-9739392423, ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್. ಆವರಣ ಕೇಂದ್ರ ವಿರೇಂದ್ರ ಎಸ್. – 9663758820, ಬೆಳ್ತಂಗಡಿ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ, ಪುತ್ತೂರು ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ ಹಾಗೂ ಸುಳ್ಯ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರದ ಸಂಪತ್ – 9449864424, ಮಂಗಳೂರು ತಾಲೂಕಿನ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣ ಕೇಂದ್ರದ ಚೇತನ್ ನಾಯಕ್ ಎಂ.ಎಸ್. – 9739392423 ಅವರನ್ನು ಸಂಪರ್ಕಿಸಬಹುದು.
ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಯಾವುದೇ ಸಂದರ್ಭದಲ್ಲೂ ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Copra to be procured at support price in Dakshina Kannada by Central government. centre to procure fair average quality (FAQ) ball copra from growers at a support price of ₹11,750 per quintal
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm