ಬ್ರೇಕಿಂಗ್ ನ್ಯೂಸ್
23-02-23 03:28 pm Mangalore Correspondent ಕರಾವಳಿ
ಮಂಗಳೂರು, ಫೆ.23 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಂತಕರಿಗೆ ತರಬೇತಿ ನೀಡಲಾಗಿತ್ತು ಎನ್ನಲಾದ ವಿಟ್ಲ ಬಳಿಯ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಮತ್ತು ಅಲ್ಲಿನ 20 ಸೆಂಟ್ ಆಸ್ತಿಯನ್ನು ಎನ್ಐಎ ವಶಕ್ಕೆ ಪಡೆದಿದೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ ಎಜುಕೇಶನ್ ಎಂಡ್ ಚಾರಿಟೇಬಲ್ ಟ್ರಸ್ಟ್ ಅಡಿ ಕಾರ್ಯ ನಿರ್ವಹಿಸುತ್ತಿದ್ದ ಫ್ರೀಡಂ ಕಮ್ಯನಿಟಿ ಹಾಲ್ ಕಟ್ಟಡ ಮತ್ತು 20 ಸೆಂಟ್ ಜಾಗದ ಸುತ್ತಳತೆಯ ಸಂಪೂರ್ಣ ಆಸ್ತಿಯನ್ನು ಎನ್ಐಎ ಅಧಿಕಾರಿಗಳು ಯುಎಪಿಎ ಕಾಯ್ದೆಯಡಿ ತಮ್ಮ ವಶಕ್ಕೆ ಪಡೆದು ಆದೇಶ ಮಾಡಿದ್ದಾರೆ. ಅದರಂತೆ, ಈ ಜಾಗವನ್ನು ಯಾವುದೇ ಕಾರಣಕ್ಕೂ ಇತರರಿಗೆ ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಲೀಜ್ ಕೊಡುವಂತಿಲ್ಲ. ಖಾಸಗಿಯಾಗಿ ಬಳಕೆ ಮಾಡುವಂತಿಲ್ಲ. ಅಲ್ಲಿರುವ ಯಾವುದೇ ಸೊತ್ತು, ಆಸ್ತಿಯನ್ನು ಬೇರೆ ಕಡೆ ಸಾಗಿಸುವಂತಿಲ್ಲ.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಬೆಂಗಳೂರು ಎನ್ಐಎ ಘಟಕದ ಎಸ್ಪಿ ಶಣ್ಮುಗಂ ಈ ಬಗ್ಗೆ ಆದೇಶ ಮಾಡಿದ್ದಾರೆ. ಇದಲ್ಲದೆ, ಕೇಂದ್ರ ಗೃಹ ಸಚಿವಾಲಯದಡಿ ಇರುವ ರಾಷ್ಟ್ರೀಯ ತನಿಖಾ ದಳದ ಅಧೀನಕ್ಕೆ ಪಡೆದು, ಫ್ರೀಡಂ ಕಮ್ಯುನಿಟಿ ಹಾಲ್ ಸೆಂಟರಿನ ಕಾರ್ಯದರ್ಶಿಯಿಂದ ಸಹಿಯನ್ನೂ ಪಡೆದಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ವಿಟ್ಲ ಠಾಣಾಧಿಕಾರಿಗೆ ಆದೇಶ ಪ್ರತಿ ರವಾನೆ ಮಾಡಲಾಗಿದೆ. ಪ್ರವೀಣ್ ಹತ್ಯೆ ಭಯೋತ್ಪಾದಕ ಕೃತ್ಯ, ಸಮಾಜದಲ್ಲಿ ಭೀತಿ ಮೂಡಿಸಲು ಮಾಡಿದ್ದ ಕೃತ್ಯ ಎಂದು ಎನ್ಐಎ ಚಾರ್ಜ್ ಶೀಟ್ ನಲ್ಲಿ ಹಾಕಲಾಗಿತ್ತು.
ಅಲ್ಲದೆ, ಪಿಎಫ್ಐ ಸಂಘಟನೆಯ ಅಸಾಲ್ಟ್ ಟೀಮ್ ಅಂದರೆ, ಹಂತಕರ ತಂಡದ ಸದಸ್ಯರ ತರಬೇತಿಗೆ ಫ್ರೀಡಂ ಕಮ್ಯುನಿಟಿ ಸಭಾಂಗಣವನ್ನು ಬಳಸುತ್ತಿದ್ದರು ಎಂದು ಉಲ್ಲೇಖ ಮಾಡಲಾಗಿತ್ತು. ಕಳೆದ ಸೆಪ್ಟೆಂಬರ್ 27ರಂದು ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಬಳಿಕ ಈ ಹಾಲ್ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಜಪ್ತಿ ಮಾಡಿ ಸೀಲ್ ಹಾಕಿತ್ತು. ಇದೀಗ ಅಲ್ಲಿನ ಆಸ್ತಿಯನ್ನು ಯಾವುದೇ ವ್ಯಕ್ತಿ ಬಳಸುವಂತಿಲ್ಲ ಮತ್ತು ದೇಶದ್ರೋಹದ ಕಾಯ್ದೆಯಡಿ ಅಲ್ಲಿನ ಆಸ್ತಿಯನ್ನೂ ವಶಕ್ಕೆ ಪಡೆದು ಎನ್ಐಎ ತನ್ನ ಅಧೀನಕ್ಕೆ ತೆಗೆದುಕೊಂಡಿದೆ.
Praveen nettaru murder case, NIA Seize PFI community hall at vitla in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm