ಬ್ರೇಕಿಂಗ್ ನ್ಯೂಸ್
23-02-23 11:13 pm Mangaluru Correspondent ಕರಾವಳಿ
ಪುತ್ತೂರು, ಫೆ.23: ಕಾಡಾನೆ ಸೆರೆಹಿಡಿದು ಬೇರೆ ಕಡೆಗೆ ಒಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿರುವ ವೇಳೆಯಲ್ಲೇ ಸ್ಥಳೀಯರು ನೂರಾರು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅರಣ್ಯಾಧಿಕಾರಿಗಳ ಕಾರನ್ನು ಪುಡಿಗಟ್ಟಿದ ಘಟನೆ ನಡೆದಿದೆ.
ಗುರುವಾರ ಸಂಜೆ ಒಂದು ಕಾಡಾನೆಯನ್ನು ಪ್ರಯಾಸದಿಂದ ಸೆರೆಹಿಡಿದು ಕಟ್ಟಿ ಹಾಕಲಾಗಿತ್ತು. ಬಳಿಕ ಅದನ್ನು ಬೇರೆ ಕಡೆಗೆ ಒಯ್ಯಲು ಪ್ರಯತ್ನ ಪಡುತ್ತಿದ್ದಾಗಲೇ ಜನರ ಆಕ್ರೋಶ ಅಧಿಕಾರಿಗಳತ್ತ ತಿರುಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಸ್ಥಳೀಯರು ಆಕ್ರೋಶಕ್ಕೀಡಾಗಿ ದಾಳಿ ನಡೆಸಿದ್ದಾರೆ.


ಅರಣ್ಯ ಇಲಾಖೆ ಅಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿ ವಾಹನಗಳನ್ನು ಜಖಂಗೊಳಿಸಿದ್ದು ಘೆರಾವ್ ಹಾಕಿದ್ದಾರೆ. ಕಾಡಾನೆ ಉಪಟಳದ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇವರ ನಿರ್ಲಕ್ಷ್ಯದಿಂದಲೇ ಎರಡು ಜೀವ ಹೋಗುವಂತಾಗಿದೆ ಎಂದು ಜನ ಒಮ್ಮಿಂದೊಮ್ಮೆಲೇ ಜನ ತಿರುಗಿ ಬಿದ್ದಿದ್ದಾರೆ. ಅರಣ್ಯ ಪ್ರದೇಶದಿಂದ ಅಧಿಕಾರಿಗಳು ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದ್ದು ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಕಾರುಗಳು ಜಖಂ ಆಗಿವೆ.
ಗುರುವಾರ ಸಂಜೆ ಕಾಡಾನೆ ಸೆರೆಹಿಡಿದ ಸುಬ್ರಹ್ಮಣ್ಯ ಬಳಿಯ ಕೊಂಬಾರು ಎಂಬಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ಘಟನೆಯಲ್ಲಿ ಕೆಲವು ಅಧಿಕಾರಿಗಳಿಗೂ ಗಾಯಗಳಾಗಿವೆ.
Elephant that killed two in Kadaba taluk captured, Villagers Pelt Stones on police vans, attack forest officals. Totally 4 Vehicles have been damaged. Few forest perosonel have got Minor injures in the incident. The incident took place when the officals where going back capturing the wild elephant.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm