ಬ್ರೇಕಿಂಗ್ ನ್ಯೂಸ್
26-02-23 09:38 pm Mangalore Correspondent ಕರಾವಳಿ
ಮಂಗಳೂರು, ಫೆ.26: ನಗರದ ಕೆಪಿಟಿ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಭಾನುವಾರ ಸಂಜೆ ವೇಳೆಗೆ ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಪಿಟಿ ಸರ್ಕಲ್ ಕಡೆಯಿಂದ ಕೊಟ್ಟಾರ ಕಡೆಗೆ ತೆರಳುವ ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಬಳಿ ಕಾರೊಂದು ಯು ಟರ್ನ್ ತೆಗೆಯಲು ದಿಢೀರ್ ಆಗಿ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೀನಿನ ಪಿಕಪ್ ವಾಹನ ಡಿಕ್ಕಿಯಾಗಿದೆ. ಇದೇ ವೇಳೆ, ಅದರ ಹಿಂದಿನಿಂದ ಬರುತ್ತಿದ್ದ ಹಾಲಿನ ವಾಹನ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಹಾಲಿನ ವಾಹನ ಪಿಕಪ್ ವಾಹನದ ಹಿಂಭಾಗಕ್ಕೆ ನುಗ್ಗಿದ್ದು, ಅದರ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಚಾಲಕನನ್ನು ಹೊರಗೆ ತೆಗೆದು, ಎರಡು ವಾಹನಗಳನ್ನು ಬೇರ್ಪಡಿಸಲು 45 ನಿಮಿಷ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 8.30ರ ವೇಳೆಗೆ ವಾಹನಗಳನ್ನು ಕ್ರೇನ್ ಮೂಲಕ ತೆರವು ಮಾಡಲಾಯ್ತು. ಒಂದು ಬದಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಆಗಿತ್ತು. ಗಾಯಾಳು ವ್ಯಕ್ತಿ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ.

ಕೆಪಿಟಿ ಬಳಿಯ ಈ ಯು ಟರ್ನ್ ಆಗುವ ಜಾಗದಲ್ಲಿ ಹಿಂದೆಯೂ ಅಪಘಾತ ಆಗಿತ್ತು. ವಾಹನಗಳು ಸರ್ಕಲ್ ಕಡೆಯಿಂದ ವೇಗವಾಗಿ ಸಾಗುತ್ತಾ ಬಂದು, ಅಲ್ಲಿ ಯು ಟರ್ನ್ ತೆಗೆಯುವ ವೇಳೆಗೆ ಹಿಂದಿನಿಂದ ಬಂದು ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಸವಾರರು ನಿಯಂತ್ರಣ ತಪ್ಪಿದರೆ ಅಥವಾ ಸಿಗ್ನಲ್ ಹಾಕದೆ ಟರ್ನ್ ಮಾಡಲು ಹೋದರೆ ಅಪಾಯಗಳಾಗುವುದು ಮಾಮೂಲಿ ಅನ್ನುವಂತಾಗಿದೆ.
Mangalore car Pickup tempo accident near kPT, heavy traffic block at nantoor
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm