ಬ್ರೇಕಿಂಗ್ ನ್ಯೂಸ್
26-02-23 09:38 pm Mangalore Correspondent ಕರಾವಳಿ
ಮಂಗಳೂರು, ಫೆ.26: ನಗರದ ಕೆಪಿಟಿ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಭಾನುವಾರ ಸಂಜೆ ವೇಳೆಗೆ ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಪಿಟಿ ಸರ್ಕಲ್ ಕಡೆಯಿಂದ ಕೊಟ್ಟಾರ ಕಡೆಗೆ ತೆರಳುವ ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಬಳಿ ಕಾರೊಂದು ಯು ಟರ್ನ್ ತೆಗೆಯಲು ದಿಢೀರ್ ಆಗಿ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೀನಿನ ಪಿಕಪ್ ವಾಹನ ಡಿಕ್ಕಿಯಾಗಿದೆ. ಇದೇ ವೇಳೆ, ಅದರ ಹಿಂದಿನಿಂದ ಬರುತ್ತಿದ್ದ ಹಾಲಿನ ವಾಹನ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಹಾಲಿನ ವಾಹನ ಪಿಕಪ್ ವಾಹನದ ಹಿಂಭಾಗಕ್ಕೆ ನುಗ್ಗಿದ್ದು, ಅದರ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಚಾಲಕನನ್ನು ಹೊರಗೆ ತೆಗೆದು, ಎರಡು ವಾಹನಗಳನ್ನು ಬೇರ್ಪಡಿಸಲು 45 ನಿಮಿಷ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 8.30ರ ವೇಳೆಗೆ ವಾಹನಗಳನ್ನು ಕ್ರೇನ್ ಮೂಲಕ ತೆರವು ಮಾಡಲಾಯ್ತು. ಒಂದು ಬದಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಆಗಿತ್ತು. ಗಾಯಾಳು ವ್ಯಕ್ತಿ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ.

ಕೆಪಿಟಿ ಬಳಿಯ ಈ ಯು ಟರ್ನ್ ಆಗುವ ಜಾಗದಲ್ಲಿ ಹಿಂದೆಯೂ ಅಪಘಾತ ಆಗಿತ್ತು. ವಾಹನಗಳು ಸರ್ಕಲ್ ಕಡೆಯಿಂದ ವೇಗವಾಗಿ ಸಾಗುತ್ತಾ ಬಂದು, ಅಲ್ಲಿ ಯು ಟರ್ನ್ ತೆಗೆಯುವ ವೇಳೆಗೆ ಹಿಂದಿನಿಂದ ಬಂದು ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಸವಾರರು ನಿಯಂತ್ರಣ ತಪ್ಪಿದರೆ ಅಥವಾ ಸಿಗ್ನಲ್ ಹಾಕದೆ ಟರ್ನ್ ಮಾಡಲು ಹೋದರೆ ಅಪಾಯಗಳಾಗುವುದು ಮಾಮೂಲಿ ಅನ್ನುವಂತಾಗಿದೆ.
Mangalore car Pickup tempo accident near kPT, heavy traffic block at nantoor
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm