ಬ್ರೇಕಿಂಗ್ ನ್ಯೂಸ್
26-02-23 09:38 pm Mangalore Correspondent ಕರಾವಳಿ
ಮಂಗಳೂರು, ಫೆ.26: ನಗರದ ಕೆಪಿಟಿ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಭಾನುವಾರ ಸಂಜೆ ವೇಳೆಗೆ ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಪಿಟಿ ಸರ್ಕಲ್ ಕಡೆಯಿಂದ ಕೊಟ್ಟಾರ ಕಡೆಗೆ ತೆರಳುವ ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಬಳಿ ಕಾರೊಂದು ಯು ಟರ್ನ್ ತೆಗೆಯಲು ದಿಢೀರ್ ಆಗಿ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೀನಿನ ಪಿಕಪ್ ವಾಹನ ಡಿಕ್ಕಿಯಾಗಿದೆ. ಇದೇ ವೇಳೆ, ಅದರ ಹಿಂದಿನಿಂದ ಬರುತ್ತಿದ್ದ ಹಾಲಿನ ವಾಹನ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಹಾಲಿನ ವಾಹನ ಪಿಕಪ್ ವಾಹನದ ಹಿಂಭಾಗಕ್ಕೆ ನುಗ್ಗಿದ್ದು, ಅದರ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಚಾಲಕನನ್ನು ಹೊರಗೆ ತೆಗೆದು, ಎರಡು ವಾಹನಗಳನ್ನು ಬೇರ್ಪಡಿಸಲು 45 ನಿಮಿಷ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 8.30ರ ವೇಳೆಗೆ ವಾಹನಗಳನ್ನು ಕ್ರೇನ್ ಮೂಲಕ ತೆರವು ಮಾಡಲಾಯ್ತು. ಒಂದು ಬದಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಆಗಿತ್ತು. ಗಾಯಾಳು ವ್ಯಕ್ತಿ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ.
ಕೆಪಿಟಿ ಬಳಿಯ ಈ ಯು ಟರ್ನ್ ಆಗುವ ಜಾಗದಲ್ಲಿ ಹಿಂದೆಯೂ ಅಪಘಾತ ಆಗಿತ್ತು. ವಾಹನಗಳು ಸರ್ಕಲ್ ಕಡೆಯಿಂದ ವೇಗವಾಗಿ ಸಾಗುತ್ತಾ ಬಂದು, ಅಲ್ಲಿ ಯು ಟರ್ನ್ ತೆಗೆಯುವ ವೇಳೆಗೆ ಹಿಂದಿನಿಂದ ಬಂದು ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಸವಾರರು ನಿಯಂತ್ರಣ ತಪ್ಪಿದರೆ ಅಥವಾ ಸಿಗ್ನಲ್ ಹಾಕದೆ ಟರ್ನ್ ಮಾಡಲು ಹೋದರೆ ಅಪಾಯಗಳಾಗುವುದು ಮಾಮೂಲಿ ಅನ್ನುವಂತಾಗಿದೆ.
Mangalore car Pickup tempo accident near kPT, heavy traffic block at nantoor
27-08-25 02:51 pm
Bangalore Correspondent
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm