ಬ್ರೇಕಿಂಗ್ ನ್ಯೂಸ್
01-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.1 : ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕೊಡಿಯಾಲ್ ಬೈಲ್ ಬಳಿ ನಡೆದಿದ್ದು, ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದರೆ, ಮತ್ತೋರ್ವ ಬಾಲಕಿ ಪವಾಡ ಸದೃಶ್ಯ ಸಾವಿನ ದವಡೆಯಿಂದ ಪಾರಾಗಿದ್ದಾಳೆ.
ಮೃತ ಮಹಿಳೆಯನ್ನು 33 ವರ್ಷದ ವಿಜಯಾ, 4 ವರ್ಷದ ಶೋಭಿತಾ ಎಂದು ಗುರುತಿಸಲಾಗಿದೆ. 12 ವರ್ಷದ ಇನ್ನೊಬ್ಬ ಮಗಳು ಯಜ್ಞಾ ಬದುಕಿ ಉಳಿದಿದ್ದಾಳೆ. ವಿಜಯಾ ಅವರ ಮೊದಲ ಪತಿ ಸುರೇಂದ್ರ 6 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ವಿಜಯಾ 2ನೇ ಮದುವೆಯಾಗಿದ್ದು 20 ದಿನಗಳ ಹಿಂದೆ 2ನೇ ಪತಿ ಉಮೇಶ್ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದರಿಂದ ತೀವ್ರ ನೊಂದಿದ್ದ ವಿಜಯಾ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು ಇಬ್ಬರು ಮಕ್ಕಳಿಗೂ ನೇಣು ಕುಣಿಕೆ ಹಾಕಿ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಆದರೆ ಅದೃಷ್ಟವಶಾತ್ 12 ವರ್ಷದ ಯಜ್ಞಾ ಕಾಲ ಬುಡದಲ್ಲಿದ್ದ ಟೀಫಾಯಿ ಆಕೆಯನ್ನು ಬದುಕಿಸಿದೆ. ನೇಣು ಕುಣಿಕೆಯಲ್ಲಿದ್ದರೂ ಜೀವ ರಕ್ಷಣೆಗಾಗಿ ಕೂಗಿದ್ದಾಳೆ. ಮನೆಯ ಮೇಲಿನ ಮಹಡಿಯಲ್ಲಿ ಬಾಡಿಗೆ ಇದ್ದವರು ಮಗುವಿನ ಚೀರಾಟ ಕೇಳಿ ಕೆಳಗೆ ಓಡಿ ಬಂದಿದ್ದು ನೋಡಿದಾಗ ತಾಯಿ ವಿಜಯಾ ಮತ್ತು 4 ವರ್ಷದ ಮಗು ಪ್ರಾಣ ಬಿಟ್ಟಿದ್ದರು. ಯಜ್ಞಾಳನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.
Mangalore Mother commits suicide with her four year old daughter at Kodial Guthu. The deceased have been identified as Vijaya (33) and her daughter Shobita (4). Another daughter is said to be out of danger. Barke police have registered the case. She had lost her first husband six years ago and recently she lost her second Husband too.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm