ಬ್ರೇಕಿಂಗ್ ನ್ಯೂಸ್
01-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.1 : ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕೊಡಿಯಾಲ್ ಬೈಲ್ ಬಳಿ ನಡೆದಿದ್ದು, ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದರೆ, ಮತ್ತೋರ್ವ ಬಾಲಕಿ ಪವಾಡ ಸದೃಶ್ಯ ಸಾವಿನ ದವಡೆಯಿಂದ ಪಾರಾಗಿದ್ದಾಳೆ.
ಮೃತ ಮಹಿಳೆಯನ್ನು 33 ವರ್ಷದ ವಿಜಯಾ, 4 ವರ್ಷದ ಶೋಭಿತಾ ಎಂದು ಗುರುತಿಸಲಾಗಿದೆ. 12 ವರ್ಷದ ಇನ್ನೊಬ್ಬ ಮಗಳು ಯಜ್ಞಾ ಬದುಕಿ ಉಳಿದಿದ್ದಾಳೆ. ವಿಜಯಾ ಅವರ ಮೊದಲ ಪತಿ ಸುರೇಂದ್ರ 6 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ವಿಜಯಾ 2ನೇ ಮದುವೆಯಾಗಿದ್ದು 20 ದಿನಗಳ ಹಿಂದೆ 2ನೇ ಪತಿ ಉಮೇಶ್ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದರಿಂದ ತೀವ್ರ ನೊಂದಿದ್ದ ವಿಜಯಾ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು ಇಬ್ಬರು ಮಕ್ಕಳಿಗೂ ನೇಣು ಕುಣಿಕೆ ಹಾಕಿ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಆದರೆ ಅದೃಷ್ಟವಶಾತ್ 12 ವರ್ಷದ ಯಜ್ಞಾ ಕಾಲ ಬುಡದಲ್ಲಿದ್ದ ಟೀಫಾಯಿ ಆಕೆಯನ್ನು ಬದುಕಿಸಿದೆ. ನೇಣು ಕುಣಿಕೆಯಲ್ಲಿದ್ದರೂ ಜೀವ ರಕ್ಷಣೆಗಾಗಿ ಕೂಗಿದ್ದಾಳೆ. ಮನೆಯ ಮೇಲಿನ ಮಹಡಿಯಲ್ಲಿ ಬಾಡಿಗೆ ಇದ್ದವರು ಮಗುವಿನ ಚೀರಾಟ ಕೇಳಿ ಕೆಳಗೆ ಓಡಿ ಬಂದಿದ್ದು ನೋಡಿದಾಗ ತಾಯಿ ವಿಜಯಾ ಮತ್ತು 4 ವರ್ಷದ ಮಗು ಪ್ರಾಣ ಬಿಟ್ಟಿದ್ದರು. ಯಜ್ಞಾಳನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.
Mangalore Mother commits suicide with her four year old daughter at Kodial Guthu. The deceased have been identified as Vijaya (33) and her daughter Shobita (4). Another daughter is said to be out of danger. Barke police have registered the case. She had lost her first husband six years ago and recently she lost her second Husband too.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am