ಬ್ರೇಕಿಂಗ್ ನ್ಯೂಸ್
01-03-23 09:29 pm Mangalore Correspondent ಕರಾವಳಿ
ಮಂಗಳೂರು, ಮಾ.1 : ಹಣಕ್ಕಾಗಿ ವೃದ್ಧರೊಬ್ಬರನ್ನು ಯುವಕರು ಸೇರಿ ಇರಾ ಬಳಿಯ ನಿರ್ಜನ ಪ್ರದೇಶದಲ್ಲಿ ಹತ್ಯೆಗೈದು ಹೂತಿಟ್ಟ ಪ್ರಕರಣದಲ್ಲಿ ಐವರು ಆರೋಪಿಗಳ ಅಪರಾಧ ನ್ಯಾಯಾಲಯದಲ್ಲಿ ಸಾಬೀತಾಗಿದೆ, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಈ ಬಗ್ಗೆ ತೀರ್ಪು ನೀಡಿರುವ ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾತಿ, ಶಿಕ್ಷೆ ಪ್ರಮಾಣವನ್ನು ಮಾರ್ಚ್ 3ನೇ ತಾರೀಕಿಗೆ ಕಾಯ್ದಿರಿಸಿದ್ದಾರೆ. ತೊಕ್ಕೊಟ್ಟು ಬಳಿಯ ಮಲಾರ್ ಗ್ರಾಮದ ಪಲ್ಲಿಯಬ್ಬ ಎಂಬ ವ್ಯಕ್ತಿಯನ್ನು ಹಣಕ್ಕಾಗಿ ಕತ್ತು ಹಿಸುಕಿ ಕೊಲ್ಲಲಾಗಿತ್ತು. ವ್ಯಕ್ತಿ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿದ್ದರು. ಪೋಲೀಸರು ತನಿಖೆ ನಡೆಸಿದಾಗ ಕೊಲೆ ಎಂದು ಸಾಬೀತಾಗಿತ್ತು. ಮಲಾರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್ (44), ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಪಾವೂರು ಗ್ರಾಮದ ಮಲಾರ್ನಿಂದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಪಲ್ಲಿಯಬ್ಬ ಎಂಬವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ಹತ್ಯೆಗೈದು ಹೂತು ಹಾಕಲಾಗಿತ್ತು ಎಂದು ಕೊಣಾಜೆ ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಎರಡೇ ವರ್ಷದಲ್ಲಿ ವಿಚಾರಣೆ ಪೂರ್ತಿಗೊಳಿಸಿದ ನ್ಯಾಯಾಲಯ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ.
Mangalore 70-year-old Palliabba Murder Case, court finds all the five accused guilty . The body of a 70-year-old man had gone missing from Malar and was found buried in Ira. The deceased was Palliabba alias Palliyaka (70) a resident of Arastan, Malar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm