ಬ್ರೇಕಿಂಗ್ ನ್ಯೂಸ್
02-03-23 12:02 pm Udupi Correspondent ಕರಾವಳಿ
ಉಡುಪಿ, ಮಾ.1: ಸಚಿವ ಸುನಿಲ್ ಕುಮಾರ್ ವಿರುದ್ಧ ಮತ್ತೆ ಪ್ರಮೋದ್ ಮುತಾಲಿಕ್ ವಾಗ್ದಾಳಿ ಮುಂದುವರಿಸಿದ್ದಾರೆ. ಕೈಗಾರಿಕಾ ವಲಯ ಸ್ಥಾಪನೆ ಹೆಸರಲ್ಲಿ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ 67 ಎಕರೆ ಜಾಗವನ್ನು ಖರೀದಿಸಲು ಉದ್ದೇಶಿಸಲಾಗಿದೆ. ಅದನ್ನು ಗಜಾನನ ಮತ್ತು ವಿದ್ಯಾ ಸುವರ್ಣ ಎಂಬವರ ಹೆಸರಿನಲ್ಲಿ ಬೇನಾಮಿಯಾಗಿದ್ದು ಇವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು, ಇದರ ಹಿಂದೆ 'ಪ್ರಭಾವಿ' ಸಚಿವರ ಕೈವಾಡದ ಶಂಕೆಯಿದ್ದು ಸಚಿವರೇ ಬೇನಾಮಿ ಹೆಸರಲ್ಲಿ ಭಾರೀ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಇದೇ ಜಾಗವನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಖರೀದಿ ಬೆಲೆಗಿಂತ 5-6 ಪಟ್ಟು ಹೆಚ್ಚಿನ ಬೆಲೆಗೆ ಸರಕಾರ ಖರೀದಿ ಮಾಡುವ ಹಂತದಲ್ಲಿದೆ. ಇದರಿಂದ ಮೂಲ ಜಾಗದ ಮಾಲಕರಾದ ರೈತರಿಗೆ ಅನ್ಯಾಯವಾಗಿದೆ. ಇದು ಬೇನಾಮಿ ಆಸ್ತಿ ಎಂಬ ಸಂಶಯವಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪ್ರಮೋದ್ ಮುತಾಲಿಕ್, ಉಡುಪಿ ಜಿಲ್ಲಾಧಿಕಾರಿಗೆ ಮನವಿ ನೀಡಿ ತನಿಖೆಗೆ ಒತ್ತಾಯಿಸಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬೇನಾಮಿ ಆಸ್ತಿ ವ್ಯವಹಾರದ ಕುರಿತು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಗೆ ಮನವಿ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಮುತಾಲಿಕ್, ಇಡೀ ಪ್ರಕರಣದಲ್ಲಿ ನಡೆದಿರುವ ಅವ್ಯವಹಾರವನ್ನು ಬಿಡಿಸಿಟ್ಟರು.
ಶಿವಪುರದಲ್ಲಿ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ಖರೀದಿಸಿರುವ 67 ಎಕರೆ ಭೂಮಿ ಬೇನಾಮಿ ಆಸ್ತಿ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬಿಜೆಪಿ ತಾಲೂಕು ಸಮಿತಿಯಲ್ಲಿರುವ ದಂಪತಿ ಹೆಸರಿನಲ್ಲಿ 67 ಎಕರೆ ಭೂಮಿ ಖರೀದಿಯಾಗಿದೆ. ಈ ಬೇನಾಮಿ ಆಸ್ತಿ ಖರೀದಿಯ ಹಿಂದೆ 'ಪವರ್ಫುಲ್' ಸಚಿವರ ಕೈವಾಡವಿರುವ ಬಲವಾದ ಶಂಕೆ ಇದೆ ಎಂದು ಗಂಭೀರ ಆರೋಪ ಮಾಡಿದರು.
ಈ ಜಾಗದಲ್ಲಿ ಸರಕಾರ 'ಕೈಗಾರಿಕಾ ವಲಯ' ಪ್ರಾರಂಭಿಸಲಿದೆ ಎಂದು ಗೊತ್ತಿದ್ದೇ ಭೂಮಿಯನ್ನು ಖರೀದಿಸಲಾಗಿದೆ. ಇವರ ಜಾಗ ಖರೀದಿಸಿಟ್ಟ ಕೆಲವೇ ದಿನಗಳಲ್ಲಿ ಸರಕಾರ ಜಾಗವನ್ನು ಇಂಡಸ್ಟ್ರಿಯಲ್ ಏರಿಯಾ ಎಂದು ಘೋಷಿಸಿದೆ. ಇದರಿಂದ ಜಾಗದ ಬೆಲೆ ನಾಲ್ಕೈದು ಪಟ್ಟು ಹೆಚ್ಚಾಗಿದೆ. ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಲ್ಲಿ ಸಚಿವರ ಪ್ರಭಾವ ವ್ಯವಸ್ಥಿತವಾಗಿ ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಬಗ್ಗೆ ತಮ್ಮಲ್ಲಿ ದಾಖಲೆಗಳಿದ್ದು ಸಮಗ್ರ ತನಿಖೆ ನಡೆಸಬೇಕು ಎಂದು ಎಂದು ಮುತಾಲಿಕ್ ಹೇಳಿದರು.
ಜಿಲ್ಲಾಧಿಕಾರಿಗಳು ಕೂಡಲೇ ಪ್ರಕರಣವನ್ನು ಸಮಗ್ರ ತನಿಖೆಗೊಳಪಡಿಸಿ ಬೇನಾಮಿ ಆಸ್ತಿಯ ಮಾಲಕರನ್ನು ಪತ್ತೆ ಹಚ್ಚಬೇಕು. ಸಂಬಂಧಪಟ್ಟ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಜೊತೆಗೆ ಆದಾಯ ತೆರಿಗೆ ಇಲಾಖೆ ಹಾಗೂ ಲೋಕಾಯುಕ್ತಕ್ಕೂ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.
Power Minister Sunil Kumar alleged of having 67 acres of illegal land in different names in Karkala slams Pramod Muthalik.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm