ಬ್ರೇಕಿಂಗ್ ನ್ಯೂಸ್
02-03-23 07:05 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಶಾಸಕ ಖಾದರ್ ಅವರು ತುದಿ ಬೆರಳಲ್ಲಿ ಆಡಿಸುತ್ತಿರುವ ಉಳ್ಳಾಲ ನಗರಸಭೆಯ ಗೋಡೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಉಳ್ಳಾಲವನ್ನ ನಂ.1 ಮಾಡಲು ರಿಯಾಝ್ ಫರಂಗಿಪೇಟೆಯನ್ನ ಅಖಾಡಕ್ಕೆ ಇಳಿಸಿದ್ದೇವೆ ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಸವಾಲೆಸೆದಿದ್ದಾರೆ.
ಉಳ್ಳಾಲ ನಗರಸಭೆಯ ಭ್ರಷ್ಟಾಚಾರದ ವಿರುದ್ಧ ಮತ್ತು ಮೂಲಭೂತ ಸೌಕರ್ಯ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ನಗರ ಸಮಿತಿ ವತಿಯಿಂದ ಉಳ್ಳಾಲ ನಗರಸಭೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಆಡಳಿತವುಳ್ಳ ಉಳ್ಳಾಲ ನಗರಸಭೆ ಜನರಿಗೆ ಬೇಕಾದ ಮೂಲಭೂತ ಸವಲತ್ತುಗಳನ್ನ ಒದಗಿಸಿಲ್ಲ. ಮಾತ್ರವಲ್ಲದೆ ಜನರ ಸಮಸ್ಯೆಗಳಿಗೆ ಸ್ಪಂದಿಸಲೂ ಸಂಪೂರ್ಣ ವಿಫಲವಾಗಿದೆ. ಬಹುಮಹಡಿ ಕಟ್ಟಡಗಳು, ಬಾಡಿಗೆ ಅಂಗಡಿಗಳ ಆದಾಯದಲ್ಲಿ ನಗರಸಭೆ ಭ್ರಷ್ಟಾಚಾರ ನಡೆಸುತ್ತಲೇ ಬಂದಿದೆ. ಆದರೆ ಬಡಜನರ ಬೇಡಿಕೆಯ ಒಂದು ದಾರಿ ದೀಪ ಕಲ್ಪಿಸಲು ನಗರಸಭೆಗೆ ಸಾಧ್ಯವಾಗಿಲ್ಲ. ಎಸ್ ಡಿಪಿಐ ಮನಸು ಮಾಡಿದರೆ ನಿಮ್ಮನ್ನ ಅಧಿಕಾರದಿಂದ ಕಿತ್ತೆಸಯಲು ಸಾಧ್ಯವಿದೆ. ಉಳ್ಳಾಲ ವಿಧಾನಸಭಾ ಕ್ಷೇತ್ರದ ಸ್ಥಳೀಯಾಡಳಿತಗಳಿಗೆ ನಡೆದ ಚುನಾವಣೆಗಳ ಫಲಿತಾಂಶಗಳಲ್ಲಿ ನಮ್ಮ ಪಕ್ಷ ಗಳಿಸಿದ ಸ್ಥಾನಗಳನ್ನ ಗಮನಿಸಿ. ಕ್ಷೇತ್ರದ ಶಾಸಕ ಖಾದರ್ ಅವರು ಎಸ್ ಡಿಪಿಐ ಮತ್ತು ಜೆಡಿಎಸ್ ನಗರಸಭಾ ಸದಸ್ಯರನ್ನ ಕಡೆಗಣಿಸಿ ಕೇವಲ ತನ್ನ ಪಕ್ಷದ ಸದಸ್ಯರಿಗೆ ಅನುದಾನ ನೀಡಿ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆ. ಹೀಗೆ ಮುಂದುವರಿದರೆ ಶಾಸಕರ ಮನೆ ಮುಂದೆ ಎಸ್ ಡಿಪಿಐ ಉಗ್ರ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆ ನೀಡಿದರು. ಅಲ್ಲದೆ ಈ ಬಾರಿ ಎಸ್ ಡಿಪಿಐ ಪಕ್ಷವು ರಿಯಾಝ್ ಫರಂಗಿಪೇಟೆ ಅವರನ್ನ ಉಳ್ಳಾಲದಲ್ಲಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯನ್ನಾಗಿ ಅಖಾಡಕ್ಕಿಳಿಸಿದ್ದು ಅವರು ಉಳ್ಳಾಲವನ್ನ ನಂ.1 ಮಾಡೇ ಮಾಡುತ್ತಾರೆ ಎಂದರು.
ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಅಧ್ಯಕ್ಷ ಎ.ಆರ್ ಅಬ್ಬಾಸ್, ಉಪಾಧ್ಯಕ್ಷ ಇಮ್ತಿಯಾಝ್ ಕೋಟೆಪುರ, ಕ್ಷೇತ್ರ ಸಮಿತಿ ಸದಸ್ಯ ಶೋಯೆಬ್ ಉಳ್ಳಾಲ್, ಮುಸ್ಲಿಂ ಒಕ್ಕೂಟ ಅಧ್ಯಕ್ಷ ಇಸ್ಮಾಯಿಲ್, ನಗರಸಭೆ ಸದಸ್ಯರಾದ ಝರೀನಾ ಬಾನು, ಖಮರುನ್ನೀಸಾ ನಿಝಾಮ್, ರಮೀಝ್, ಅಝ್ಗರ್, ಶೈನಾಝ್ ಅಕ್ರಮ್, ರುಖ್ಯ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.
Mangalore SDPI members protest warns Mla UT Khader as Riyaz farangipete to contest from ullal.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm