ಬ್ರೇಕಿಂಗ್ ನ್ಯೂಸ್
22-10-20 09:35 pm Mangalore reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ವಿವಿಧ ಜಾತಿಗಳ ಅಭಿವೃದ್ಧಿ ನಿಗಮದಡಿ ಸಾಲ ಸೌಲಭ್ಯಕ್ಕೆ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.
ಉಪ್ಪಾರ ಜನಾಂಗ 2 (1.5 ಲಕ್ಷ ), ವಿಶ್ವಕರ್ಮ 12 (6 ಲಕ್ಷ), ಸವಿತಾ ಸಮಾಜ 12 (6 ಲಕ್ಷ ), ಮಡಿವಾಳ ಸಮಾಜ 143, ಅಂಬಿಗರ 117 (58.5 ಲಕ್ಷ) ಮಂದಿಯನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಯಿತು. ವಿಶ್ವಕರ್ಮ ಸಮುದಾಯದಿಂದ 341 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಜಿಲ್ಲೆಗೆ 6 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದ್ದರಿಂದ 12 ಮಂದಿ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಯ್ತು. ಮಡಿವಾಳ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ 72 ಲಕ್ಷ ರೂ. ಅನುದಾನ ಬಂದಿದ್ದು, ಅರ್ಜಿ ಸಲ್ಲಿಕೆ ಮಾಡಿದ್ದ 143 ಮಂದಿಗೂ ಸಾಲ ಯೋಜನೆಗ ಪರಿಗಣಿಸಲಾಯ್ತು.
ವಿಶ್ವಕರ್ಮ ಸಮುದಾಯದಿಂದ ಅತಿ ಹೆಚ್ಚು 341 ಅರ್ಜಿಗಳು ಬಂದಿದ್ದವು. ಪ್ರತಿ ವರ್ಷ ಈ ಸಮುದಾಯಕ್ಕೆ ಅನುದಾನ ಕಡಿಮೆ ಬರುತ್ತಿರುವುದರಿಂದ ಫಲಾನುಭವಿಗಳ ಆಯ್ಕೆ ಕಗ್ಗಂಟಾಗಿದೆ. ಹೀಗಾಗಿ ಬಂಟ್ವಾಳ, ಬೆಳ್ತಂಗಡಿ ಹೀಗೆ ದೂರದ ಪ್ರದೇಶಗಳಿಂದ ಬಂದಿದ್ದ ಜನರು ತಮಗೆ ಸೌಲಭ್ಯ ಸಿಗದಿರುವ ವಿಚಾರದಲ್ಲಿ ಅಧಿಕಾರಿಗಳನ್ನು ಶಪಿಸುತ್ತಾ ಮರಳಿದರು.
ಈ ಬಗ್ಗೆ ಅಧಿಕಾರಿಗಳ ಬಳಿ ಪ್ರಶ್ನೆ ಮಾಡಿದಾಗ, ಅನುದಾನ ಬಂದ ಹಣದಲ್ಲಿ ನಾವು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುತ್ತೇವೆ. ಹಣ ಕಡಿಮೆ ಬಂದಲ್ಲಿ ನಾವು ಏನೂ ಮಾಡಲು ಬರುವುದಿಲ್ಲ. ಪ್ರತಿ ವರ್ಷದ ಅರ್ಜಿಗಳನ್ನು ಮುಂದಿನ ಬಾರಿಗೆ ಸೇರ್ಪಡೆ ಮಾಡುತ್ತೇವೆ. ಲಾಟರಿ ಎತ್ತುವ ದಿನ ಎಲ್ಲರಿಗೂ ಸಂದೇಶ ಕಳಿಸಿ, ಬರಲು ಹೇಳುತ್ತೇವೆ ಎಂದು ತಿಳಿಸಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm