ಬ್ರೇಕಿಂಗ್ ನ್ಯೂಸ್
04-03-23 08:23 pm Mangalore Correspondent ಕರಾವಳಿ
ಮಂಗಳೂರು, ಮಾ.4: ಗ್ಯಾಸ್ ಸಿಲಿಂಡರ್ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಗ್ಯಾಸ್ ಸಿಲಿಂಡರ್ ಬದಲು ರಸ್ತೆಯ ಮಧ್ಯೆ ಒಲೆಯನ್ನು ಉರಿಸಿ, ಮಹಿಳಾ ಕಾರ್ಯಕರ್ತರು ಅದರಲ್ಲಿ ಚಪಾತಿ ಕಾಯಿಸಿದ್ದಾರೆ. ಆಮೂಲಕ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಅಣಕಿಸಿ ಘೋಷಣೆ ಕೂಗಿದ್ದಾರೆ. ಬಿಜೆಪಿ ಸರಕಾರಕ್ಕೆ ಧಿಕ್ಕಾರ ಘೋಷಣೆ ಕೂಗುತ್ತಲೇ ಈ ಹಿಂದೆ ಗ್ಯಾಸ್ ಸಿಲಿಂಡರಿಗೆ 450 ರೂ. ಆದಾಗ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಸಿಲಿಂಡರನ್ನು ಹೊತ್ತಿಕೊಂಡು ಬಂದು ಪ್ರತಿಭಟನೆ ನಡೆಸಿದ್ದರು. ಈಗ ಗ್ಯಾಸ್ ಬೆಲೆ 1150 ರೂಪಾಯಿ ಆಗಿದೆ. ಈಗ ಯಾಕೆ ಶೋಭಕ್ಕ ಮಾತನಾಡುತ್ತಿಲ್ಲ. ಪ್ರತಿಭಟನೆ ಮಾಡೋದಿಲ್ಲ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.
ಹಿಂದೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಪ್ರತಿಭಟನೆ ನಡೆಸಿದ್ದ ಫೋಟೋಗಳನ್ನು ಭಿತ್ತಿಪತ್ರಗಳಲ್ಲಿ ತೋರಿಸಿ ಅಣಕಿಸಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಪರಿಷತ್ ಸದಸ್ಯ ಐವಾನ್ ಡಿಸೋಜ, ಇದು ಎರಡು ಚಪಾತಿಯಲ್ಲಿ ಒಂದು ಮೋದಿಗೆ, ಇನ್ನೊಂದು ಸಿಎಂ ಬೊಮ್ಮಾಯಿಗೆ ಕಳಿಸಲಾಗುವುದು. ಚಪಾತಿ ಬೇಯಿಸಬೇಕಿದ್ದರೆ ಎಷ್ಟು ಒಲೆ ಸುಡುವ ಕೆಲಸ ಮಾಡಬೇಕು. ಇದರಿಂದ ಎಷ್ಟರಮಟ್ಟಿಗೆ ಕೈ ಸುಟ್ಟುಕೊಳ್ಳುವ ಸ್ಥಿತಿ ಜನರಿಗೆ ಆಗಿದೆ ಎಂಬುದನ್ನು ತಿಳಿಸುತ್ತೇವೆ. ಇಲ್ಲಿ ಹಾಕಿರುವ ಕಟ್ಟಿಗೆ ಅಮಿತ್ ಷಾನಿಗೆ ಎಂದು ಹೇಳಿ ಅಣಕಿಸಿದರು.
ಜಿಲ್ಲಾ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಜನರ ಕಷ್ಟ ಬಿಜೆಪಿ ಸರಕಾರಕ್ಕೆ ತಿಳಿಯುತ್ತಿಲ್ಲ. ಬಿಜೆಪಿ ಶಾಸಕರು ನಲ್ವತ್ತು ಪರ್ಸೆಂಟ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಒಲೆಯಲ್ಲಿ ಸುಟ್ಟು ಹೋದ ಚಪಾತಿಯನ್ನು ಮೋದಿ ಮತ್ತು ಅಮಿತ್ ಷಾಗೆ ಕಳಿಸಿಕೊಟ್ಟು ಜನರ ಸ್ಥಿತಿಯೂ ಬೆಂದು ಹೋಗಿದೆ ಎನ್ನುವುದನ್ನು ತಿಳಿಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಲೆಟ್ ಪಿಂಟೋ ಸೇರಿದಂತೆ ಹಲವಾರು ಕಾರ್ಯಕರ್ತರು ಸೇರಿದ್ದರು.
Mangalore Congress leaders staged a noisy protest on Wednesday against the steep hike in cooking gas prices for domestic and commercial users and demanded a rollback.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm