ಬ್ರೇಕಿಂಗ್ ನ್ಯೂಸ್
04-03-23 08:23 pm Mangalore Correspondent ಕರಾವಳಿ
ಮಂಗಳೂರು, ಮಾ.4: ಗ್ಯಾಸ್ ಸಿಲಿಂಡರ್ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಗ್ಯಾಸ್ ಸಿಲಿಂಡರ್ ಬದಲು ರಸ್ತೆಯ ಮಧ್ಯೆ ಒಲೆಯನ್ನು ಉರಿಸಿ, ಮಹಿಳಾ ಕಾರ್ಯಕರ್ತರು ಅದರಲ್ಲಿ ಚಪಾತಿ ಕಾಯಿಸಿದ್ದಾರೆ. ಆಮೂಲಕ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಅಣಕಿಸಿ ಘೋಷಣೆ ಕೂಗಿದ್ದಾರೆ. ಬಿಜೆಪಿ ಸರಕಾರಕ್ಕೆ ಧಿಕ್ಕಾರ ಘೋಷಣೆ ಕೂಗುತ್ತಲೇ ಈ ಹಿಂದೆ ಗ್ಯಾಸ್ ಸಿಲಿಂಡರಿಗೆ 450 ರೂ. ಆದಾಗ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಸಿಲಿಂಡರನ್ನು ಹೊತ್ತಿಕೊಂಡು ಬಂದು ಪ್ರತಿಭಟನೆ ನಡೆಸಿದ್ದರು. ಈಗ ಗ್ಯಾಸ್ ಬೆಲೆ 1150 ರೂಪಾಯಿ ಆಗಿದೆ. ಈಗ ಯಾಕೆ ಶೋಭಕ್ಕ ಮಾತನಾಡುತ್ತಿಲ್ಲ. ಪ್ರತಿಭಟನೆ ಮಾಡೋದಿಲ್ಲ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.



ಹಿಂದೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಪ್ರತಿಭಟನೆ ನಡೆಸಿದ್ದ ಫೋಟೋಗಳನ್ನು ಭಿತ್ತಿಪತ್ರಗಳಲ್ಲಿ ತೋರಿಸಿ ಅಣಕಿಸಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಪರಿಷತ್ ಸದಸ್ಯ ಐವಾನ್ ಡಿಸೋಜ, ಇದು ಎರಡು ಚಪಾತಿಯಲ್ಲಿ ಒಂದು ಮೋದಿಗೆ, ಇನ್ನೊಂದು ಸಿಎಂ ಬೊಮ್ಮಾಯಿಗೆ ಕಳಿಸಲಾಗುವುದು. ಚಪಾತಿ ಬೇಯಿಸಬೇಕಿದ್ದರೆ ಎಷ್ಟು ಒಲೆ ಸುಡುವ ಕೆಲಸ ಮಾಡಬೇಕು. ಇದರಿಂದ ಎಷ್ಟರಮಟ್ಟಿಗೆ ಕೈ ಸುಟ್ಟುಕೊಳ್ಳುವ ಸ್ಥಿತಿ ಜನರಿಗೆ ಆಗಿದೆ ಎಂಬುದನ್ನು ತಿಳಿಸುತ್ತೇವೆ. ಇಲ್ಲಿ ಹಾಕಿರುವ ಕಟ್ಟಿಗೆ ಅಮಿತ್ ಷಾನಿಗೆ ಎಂದು ಹೇಳಿ ಅಣಕಿಸಿದರು.



ಜಿಲ್ಲಾ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಜನರ ಕಷ್ಟ ಬಿಜೆಪಿ ಸರಕಾರಕ್ಕೆ ತಿಳಿಯುತ್ತಿಲ್ಲ. ಬಿಜೆಪಿ ಶಾಸಕರು ನಲ್ವತ್ತು ಪರ್ಸೆಂಟ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಒಲೆಯಲ್ಲಿ ಸುಟ್ಟು ಹೋದ ಚಪಾತಿಯನ್ನು ಮೋದಿ ಮತ್ತು ಅಮಿತ್ ಷಾಗೆ ಕಳಿಸಿಕೊಟ್ಟು ಜನರ ಸ್ಥಿತಿಯೂ ಬೆಂದು ಹೋಗಿದೆ ಎನ್ನುವುದನ್ನು ತಿಳಿಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಲೆಟ್ ಪಿಂಟೋ ಸೇರಿದಂತೆ ಹಲವಾರು ಕಾರ್ಯಕರ್ತರು ಸೇರಿದ್ದರು.
Mangalore Congress leaders staged a noisy protest on Wednesday against the steep hike in cooking gas prices for domestic and commercial users and demanded a rollback.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm