ಬ್ರೇಕಿಂಗ್ ನ್ಯೂಸ್
04-03-23 08:23 pm Mangalore Correspondent ಕರಾವಳಿ
ಮಂಗಳೂರು, ಮಾ.4: ಗ್ಯಾಸ್ ಸಿಲಿಂಡರ್ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಗ್ಯಾಸ್ ಸಿಲಿಂಡರ್ ಬದಲು ರಸ್ತೆಯ ಮಧ್ಯೆ ಒಲೆಯನ್ನು ಉರಿಸಿ, ಮಹಿಳಾ ಕಾರ್ಯಕರ್ತರು ಅದರಲ್ಲಿ ಚಪಾತಿ ಕಾಯಿಸಿದ್ದಾರೆ. ಆಮೂಲಕ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಅಣಕಿಸಿ ಘೋಷಣೆ ಕೂಗಿದ್ದಾರೆ. ಬಿಜೆಪಿ ಸರಕಾರಕ್ಕೆ ಧಿಕ್ಕಾರ ಘೋಷಣೆ ಕೂಗುತ್ತಲೇ ಈ ಹಿಂದೆ ಗ್ಯಾಸ್ ಸಿಲಿಂಡರಿಗೆ 450 ರೂ. ಆದಾಗ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಸಿಲಿಂಡರನ್ನು ಹೊತ್ತಿಕೊಂಡು ಬಂದು ಪ್ರತಿಭಟನೆ ನಡೆಸಿದ್ದರು. ಈಗ ಗ್ಯಾಸ್ ಬೆಲೆ 1150 ರೂಪಾಯಿ ಆಗಿದೆ. ಈಗ ಯಾಕೆ ಶೋಭಕ್ಕ ಮಾತನಾಡುತ್ತಿಲ್ಲ. ಪ್ರತಿಭಟನೆ ಮಾಡೋದಿಲ್ಲ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.



ಹಿಂದೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಪ್ರತಿಭಟನೆ ನಡೆಸಿದ್ದ ಫೋಟೋಗಳನ್ನು ಭಿತ್ತಿಪತ್ರಗಳಲ್ಲಿ ತೋರಿಸಿ ಅಣಕಿಸಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಪರಿಷತ್ ಸದಸ್ಯ ಐವಾನ್ ಡಿಸೋಜ, ಇದು ಎರಡು ಚಪಾತಿಯಲ್ಲಿ ಒಂದು ಮೋದಿಗೆ, ಇನ್ನೊಂದು ಸಿಎಂ ಬೊಮ್ಮಾಯಿಗೆ ಕಳಿಸಲಾಗುವುದು. ಚಪಾತಿ ಬೇಯಿಸಬೇಕಿದ್ದರೆ ಎಷ್ಟು ಒಲೆ ಸುಡುವ ಕೆಲಸ ಮಾಡಬೇಕು. ಇದರಿಂದ ಎಷ್ಟರಮಟ್ಟಿಗೆ ಕೈ ಸುಟ್ಟುಕೊಳ್ಳುವ ಸ್ಥಿತಿ ಜನರಿಗೆ ಆಗಿದೆ ಎಂಬುದನ್ನು ತಿಳಿಸುತ್ತೇವೆ. ಇಲ್ಲಿ ಹಾಕಿರುವ ಕಟ್ಟಿಗೆ ಅಮಿತ್ ಷಾನಿಗೆ ಎಂದು ಹೇಳಿ ಅಣಕಿಸಿದರು.



ಜಿಲ್ಲಾ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಜನರ ಕಷ್ಟ ಬಿಜೆಪಿ ಸರಕಾರಕ್ಕೆ ತಿಳಿಯುತ್ತಿಲ್ಲ. ಬಿಜೆಪಿ ಶಾಸಕರು ನಲ್ವತ್ತು ಪರ್ಸೆಂಟ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಒಲೆಯಲ್ಲಿ ಸುಟ್ಟು ಹೋದ ಚಪಾತಿಯನ್ನು ಮೋದಿ ಮತ್ತು ಅಮಿತ್ ಷಾಗೆ ಕಳಿಸಿಕೊಟ್ಟು ಜನರ ಸ್ಥಿತಿಯೂ ಬೆಂದು ಹೋಗಿದೆ ಎನ್ನುವುದನ್ನು ತಿಳಿಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಲೆಟ್ ಪಿಂಟೋ ಸೇರಿದಂತೆ ಹಲವಾರು ಕಾರ್ಯಕರ್ತರು ಸೇರಿದ್ದರು.
Mangalore Congress leaders staged a noisy protest on Wednesday against the steep hike in cooking gas prices for domestic and commercial users and demanded a rollback.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm