ಬ್ರೇಕಿಂಗ್ ನ್ಯೂಸ್
06-03-23 10:11 pm Mangalore Correspondent ಕರಾವಳಿ
ಮಂಗಳೂರು, ಮಾ.6: ಉಳ್ಳಾಲ ದರ್ಗಾದಲ್ಲಿ ಏಳು ವರ್ಷದ ಸರ್ವಾಧಿಕಾರ ಅಂತ್ಯಗೊಂಡಿದ್ದು, ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಮತ್ತು ಉಪಾಧ್ಯಕ್ಷರಾಗಿ ರೈಟ್ ವೇ ಅಶ್ರಫ್ ಅಹ್ಮದ್ ಆಯ್ಕೆಯಾಗಿದ್ದಾರೆ.
ಉಳ್ಳಾಲ ಜುಮಾ ಮಸ್ಜಿದ್ ಮತ್ತು ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾದ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೋಮವಾರ ದ.ಕ. ಜಿಲ್ಲಾ ವಕ್ಫ್ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್, ಉಪಾಧ್ಯಕ್ಷರಾಗಿ ರೈಟ್ ವೇ ಅಶ್ರಫ್ ಅಹ್ಮದ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮೇಲಂಗಡಿಯ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿಯಾಗಿ ಮುಕ್ಕಚೇರಿ ಮೊಹಲ್ಲಾದ ನಾಝಿಂ ಕೋಟೆಪುರ ಆಯ್ಕೆಗೊಂಡಿದ್ದು , ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆಯೂ ನಡೆದಿದೆ.

ಉಳ್ಳಾಲ ದರ್ಗಾ ಆಡಳಿತ ಸಮಿತಿಯ ಆಯ್ಕೆಗಾಗಿ ಇತ್ತೀಚೆಗೆ ವಕ್ಫ್ ಬೋರ್ಡ್ ಚುನಾವಣೆ ನಡೆಸಿತ್ತು. ಫೆ.25ರಂದು ಕೋಟೆಪುರ, ಮೇಲಂಗಡಿ, ಮುಕ್ಕಚೇರಿ, ಅಳೇಕಲ, ಕಲ್ಲಾಪು ಹೀಗೆ 5 ವಲಯಗಳಿಂದ ತಲಾ 11 ಮಂದಿಯಂತೆ 55 ಮಂದಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿತ್ತು.
ದ.ಕ. ಜಿಲ್ಲಾ ವಕ್ಫ್ ಅಧಿಕಾರಿ ಹಾಗೂ ಚುನಾವಣಾಧಿಕಾರಿ ಸೈಯದ್ ಮೊಹಝಂ ಪಾಶಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಇಂದು ನಡೆಸಿಕೊಟ್ಟರು. ಸದಸ್ಯ ಫಾರೂಕ್ ಯು.ಎಚ್. ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
2016-17 ನೇ ಸಾಲಿನಲ್ಲಿ ನ್ಯಾಯಯುತ ಚುನಾವಣೆ ನಡೆಯದೆ ಅನಧಿಕೃತ ಸಮಿತಿ ಆಡಳಿತವನ್ನು ವಶಪಡಿಸಿಕೊಂಡು ಸ್ವಯಂಘೋಷಿತ ಪದಾಧಿಕಾರಿಗಳನ್ನು ನೇಮಿಸಿ ಏಳು ವರ್ಷಗಳ ಕಾಲ ಸರ್ವಾಧಿಕಾರದ ಆಡಳಿತ ನಡೆಸುತ್ತ ಬಂದಿತ್ತು. ಕರ್ನಾಟಕ ಸರಕಾರದ 2011 ರ ಸುತ್ತೋಲೆ ಮತ್ತು ಕರ್ನಾಟಕ ವಕ್ಫ್ ಮಂಡಳಿಯ ನಿರ್ಣಯ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ಮದ್ರಸಾ ಪಠ್ಯ ಪುಸ್ತಕಗಳನ್ನು ಬದಲಿಸಿ, ಗೊಂದಲ ಗಲಾಟೆಗಳಿಗೆ ಸ್ವಯಂಘೋಷಿತ ಸಮಿತಿ ಕಾರಣವಾಗಿತ್ತು.
Mangalore Ullal dargah gets new president after seven years, Bava Gulam Hanif new president.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm