ಬ್ರೇಕಿಂಗ್ ನ್ಯೂಸ್
08-03-23 11:10 pm Mangalore Correspondent ಕರಾವಳಿ
ಮಂಗಳೂರು, ಮಾ.8 : ನಗರದ ಬಲ್ಮಠದ ಸಿಎಸ್ಐ ಕರ್ನಾಟಕ ಧರ್ಮಪ್ರಾಂತ (ಬಿಷಪ್ ಹೌಸ್) ಕಚೇರಿಯಲ್ಲಿ ಬಿಷಪ್ ಅವರ ಸೆಕ್ರೆಟರಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹತ್ತು ವರ್ಷಗಳಿಂದ ಸೆಕ್ರೆಟರಿಯಾಗಿದ್ದ ಮಹಿಳೆಯನ್ನು ಬಿಷಪ್ ಹೌಸ್ ಖಜಾಂಚಿಯಾಗಿರುವ ವಿನ್ಸೆಂಟ್ ಪಾಲನ್ನ ಎಂಬವರು ನಾಲ್ಕು ವರ್ಷಗಳಿಂದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಷಪ್ ಹೌಸ್ ನಲ್ಲಿ ಕಾನೂನು ಸಲಹೆಗಾರರೂ ಆಗಿರುವ ಫಾದರ್ ನೋಯಲ್ ಕರ್ಕಡ ಮಹಿಳೆಯನ್ನು ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಬಗ್ಗೆ ದೂರಲಾಗಿದೆ.




ಇದಲ್ಲದೆ, ಬಿಷಪ್ ಹೌಸ್ ಆಡಳಿತ ನೋಡಿಕೊಳ್ಳುವ ಕರುಣಾಕರ ಕುಂದರ, ಮನೋಹರ ಅಮ್ಮನ್ನ, ಸುಜಾತ, ವಿಲಿಯಂ ಕೇರಿ ಎಂಬವರು ತನ್ನ ಬಗ್ಗೆ ತೇಜೋವಧೆ ಆಗುವ ರೀತಿ ವರ್ತಿಸಿದ್ದಾರೆಂದು ದೂರಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಆರು ಮಂದಿ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ವಿನ್ಸೆಂಟ್ ಪಾಲನ್ನ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ, ಬೇರೆಯವರ ಜೊತೆಗೂ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸುತ್ತಿದ್ದ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಹೆದರಿಕೆಯಿಂದ ಈವರೆಗೆ ದೂರನ್ನು ನೀಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಅತ್ಯಾಚಾರ, ಕಿರುಕುಳ, ಲೈಂಗಿಕ ಶೋಷಣೆ, ಜೀವ ಬೆದರಿಕೆ ಒಡ್ಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Balmatta CSI church Bishop secretary alleged of sexual harassment, FIR filed on six including church priest. Balmatta CSI Bishop secretary alleges of sexual and mental harassment by Vincent Palanna who is the treasurer of CSI Diocesan office in Balmatta and Rev Fr Noel P Karkada who is a priest at CSI Anglican St Paul’s Church at Hampankatta in Mangalore. The woman has sought help from Stanly Kv , Mysore who is the Founder Director at Odanadi Seva Samsthe. A complaint has been filed at Woman police station in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm