ಬ್ರೇಕಿಂಗ್ ನ್ಯೂಸ್
09-03-23 09:36 pm Mangalore Correspondent ಕರಾವಳಿ
ಮಂಗಳೂರು, ಮಾ.9 : ಚುನಾವಣೆ ಸಂದರ್ಭದಲ್ಲಿ ಬಿಲ್ಲವರ ಬಳಿಕ ಸಿಡಿದು ನಿಂತಿರುವ ಬಂಟ ಸಮುದಾಯವನ್ನು ಮನವೊಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಗೆ ಕರೆಸಿ ಬಂಟ ಸಮುದಾಯದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ವತಿಯಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕಣ್ಣೊರೆಸುವ ತಂತ್ರ ಮಾಡಿದ್ದಾರೆ. ಅಲ್ಲದೆ, ಬಂಟ ಸಮುದಾಯವನ್ನು 2ಎ ಮೀಸಲಾತಿ ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿದ್ದು ಬಂಟರ ಯಾನೆ ನಾಡವರ ಎಲ್ಲ ರೀತಿಯ ಆಶೋತ್ತರಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ ಎಂದು ಐಕಳ ಹರೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.7ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ ವರೆಗೂ ಐಕಳ ಹರೀಶ್ ಶೆಟ್ಟಿ ಜೊತೆ ಮಾತುಕತೆ ನಡೆಸಿದ್ದು ಬಂಟ ಸಮಾಜದ ಬಡವರ ಕಷ್ಟಗಳನ್ನು ಮನದಟ್ಟು ಮಾಡಿದ್ದಾರೆ. ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಅವಶ್ಯಕತೆ ಬಗ್ಗೆ ತಿಳಿಸಿದ್ದು ಅದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಜೊತೆಗಿದ್ದರು.
Bunt Community Demands Reservation Category, cm discuss matter with Harish shetty. The Bunts community, which has a large presence in Coastal Karnataka, has demanded the inclusion of the community under the 2a reservation category.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm