ಬ್ರೇಕಿಂಗ್ ನ್ಯೂಸ್
09-03-23 09:36 pm Mangalore Correspondent ಕರಾವಳಿ
ಮಂಗಳೂರು, ಮಾ.9 : ಚುನಾವಣೆ ಸಂದರ್ಭದಲ್ಲಿ ಬಿಲ್ಲವರ ಬಳಿಕ ಸಿಡಿದು ನಿಂತಿರುವ ಬಂಟ ಸಮುದಾಯವನ್ನು ಮನವೊಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಗೆ ಕರೆಸಿ ಬಂಟ ಸಮುದಾಯದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ವತಿಯಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕಣ್ಣೊರೆಸುವ ತಂತ್ರ ಮಾಡಿದ್ದಾರೆ. ಅಲ್ಲದೆ, ಬಂಟ ಸಮುದಾಯವನ್ನು 2ಎ ಮೀಸಲಾತಿ ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿದ್ದು ಬಂಟರ ಯಾನೆ ನಾಡವರ ಎಲ್ಲ ರೀತಿಯ ಆಶೋತ್ತರಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ ಎಂದು ಐಕಳ ಹರೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.7ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ ವರೆಗೂ ಐಕಳ ಹರೀಶ್ ಶೆಟ್ಟಿ ಜೊತೆ ಮಾತುಕತೆ ನಡೆಸಿದ್ದು ಬಂಟ ಸಮಾಜದ ಬಡವರ ಕಷ್ಟಗಳನ್ನು ಮನದಟ್ಟು ಮಾಡಿದ್ದಾರೆ. ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಅವಶ್ಯಕತೆ ಬಗ್ಗೆ ತಿಳಿಸಿದ್ದು ಅದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಜೊತೆಗಿದ್ದರು.
Bunt Community Demands Reservation Category, cm discuss matter with Harish shetty. The Bunts community, which has a large presence in Coastal Karnataka, has demanded the inclusion of the community under the 2a reservation category.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm