ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm