ಬ್ರೇಕಿಂಗ್ ನ್ಯೂಸ್
23-10-20 02:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 23: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ ದಿನಗಳಲ್ಲಿ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆ ಪಾಲಾಗಲಿದೆ. ಇದೇ ಅ. 31ರ ಬಳಿಕ ನಿಲ್ದಾಣದ ಪೂರ್ತಿ ಕಾರ್ಯಾಚರಣೆಯನ್ನು ಅದಾನಿ ಕಂಪನಿ ವಹಿಸಿಕೊಳ್ಳಲಿದೆ. ಈ ಬಗ್ಗೆ ಅದಾನಿ ಮಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ಕಂಪೆನಿ ಜತೆ ವಿಮಾನ ಯಾನ ಸಚಿವಾಲಯವು ಒಪ್ಪಂದಕ್ಕೆ ಅಂತಿಮ ಸಹಿ ಹಾಕಿದೆ.
ಕೆಲವು ತಿಂಗಳ ಕಾಲ ನಿರ್ವಹಣೆ ನೋಡಿಕೊಳ್ಳಲು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರೇ ಮುಂದುವರಿಯಲಿದ್ದಾರೆ. ಬಳಿಕ ಅದಾನಿ ಕಂಪೆನಿಯು ಸಿಇಓ ಆಗಿ ಪ್ರತ್ಯೇಕ ಅಧಿಕಾರಿಯನ್ನು ನಿಯೋಜಿಸಲಿದೆ.
ಮಂಗಳೂರು ವಿಮಾನ ನಿಲ್ದಾಣವನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಭಾರತ ಸರಕಾರ ಅದಾನಿ ಗ್ರೂಪ್ಗೆ 50 ವರ್ಷಗಳ ಅವಧಿಗೆ ಗುತ್ತಿಗೆ ನೀಡಿದೆ. 2018ರ ಡಿಸೆಂಬರ್ನಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಗೆ ಟೆಂಡರ್ ಆಹ್ವಾನಿಸಲಾಗಿತ್ತು. ಟೆಂಡರ್ ಪ್ರಕ್ರಿಯೆ ನಡೆದು, 2020ರ ಫೆಬ್ರವರಿಯಲ್ಲಿ ಅದಾನಿ ಸಂಸ್ಥೆಯ ಜತೆಗೆ ಒಪ್ಪಂದ ಅಂತಿಮ ಮಾಡಲಾಗಿತ್ತು. ಅದಾನಿ ಸಂಸ್ಥೆಯ ಬಳಿಕ ಇತರ ನಿರ್ವಹಣೆಗಾಗಿ ಜರ್ಮನಿಯ ಕಂಪೆನಿ ಜತೆಗೆ ಹೊರಗುತ್ತಿಗೆ ಮಾಡಲಿದೆ ಎನ್ನಲಾಗುತ್ತಿದೆ.
ಇದೇ ವೇಳೆ, ಅದಾನಿ ಸಂಸ್ಥೆಯು ಲಕ್ನೋ ಮತ್ತು ಅಹ್ಮದಾಬಾದ್ ಏರ್ಪೋರ್ಟನ್ನೂ ಗುತ್ತಿಗೆ ಪಡೆದಿದ್ದು ಕ್ರಮವಾಗಿ ನ.2 ಮತ್ತು 11 ರಂದು ಆಡಳಿತ ವಹಿಸಿಕೊಳ್ಳಲಿದೆ. ಲಾಕ್ಡೌನ್ ಕಾರಣದಿಂದ ಈ ಮೂರು ವಿಮಾನ ನಿಲ್ದಾಣಗಳ ಗುತ್ತಿಗೆ ಪ್ರಕ್ರಿಯೆ ವಿಳಂಬವಾಗಿತ್ತು. ಇದಲ್ಲದೆ, ಗುವಾಹಟಿ, ಜೈಪುರ್ ಮತ್ತು ತ್ರಿವೆಂಡ್ರಮ್ ವಿಮಾನ ನಿಲ್ದಾಣಗಳ ಗುತ್ತಿಗೆಯನ್ನೂ ಅದಾನಿ ಕಂಪನಿಯೇ ಪಡೆದಿದ್ದು ಅವುಗಳನ್ನೂ ಸದ್ಯದಲ್ಲೇ ತಮ್ಮ ತೆಕ್ಕೆಗೆ ಪಡೆಯಲಿದ್ದಾರೆ. ಇವೆಲ್ಲವೂ ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಡಿ ನಿರ್ವಹಣೆ ಆಗುತ್ತಿದ್ದವು.
ದೇಶದ ಎರಡನೇ ಅತಿದೊಡ್ಡ ಏರ್ಪೋರ್ಟ್ ಆಗಿರುವ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ತನ್ನ ವಶಕ್ಕೆ ಪಡೆಯಲು ಅದಾನಿ ಕಂಪೆನಿ ಮುಂದಾಗಿದೆ. ಇಲ್ಲಿ ವರೆಗೆ ಜಿವಿಕೆ ಗ್ರೂಪ್ ಎನ್ನುವ ಕಂಪನಿ ಇದರ ಉಸ್ತುವಾರಿ ಹೊತ್ತಿತ್ತು. ಎಲ್ಲವೂ ಅಂದ್ಕೊಂಡ ಹಾಗೆ ನಡೆದರೆ ಕೆಲವೇ ತಿಂಗಳಲ್ಲಿ ಮುಂಬೈ ಏರ್ಪೋರ್ಟ್ ಅದಾನಿ ಪಾಲಾಗಲಿದೆ.
ಮತ್ತೆ ಆರು ವಿಮಾನ ನಿಲ್ದಾಣಗಳನ್ನು ಕೇಂದ್ರ ಸರಕಾರ ಪಿಪಿಪಿ ಮಾದರಿ ನೆಪದಲ್ಲಿ ಖಾಸಗಿಗೆ ನೀಡಲು ಪ್ರಕ್ರಿಯೆ ಆರಂಭಿಸಿದೆ. ವಾರಣಾಸಿ, ಅಮೃತಸರ, ಭುಬನೇಶ್ವರ್, ರಾಯ್ಪುರ್, ಇಂದೋರ್ ಮತ್ತು ತಿರುಚ್ಚಿ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ಖಾಸಗಿ ಕಂಪನಿಗೆ ವಹಿಸಲಿದೆ. ಇವು ಕೂಡ ಅದಾನಿ ಸಂಸ್ಥೆಯ ಪಾಲಾದರೆ, ಭಾರತದಲ್ಲಿ ಬಹುತೇಕ ವಿಮಾನ ನಿಲ್ದಾಣಗಳ ನಿರ್ವಹಣೆ ಹೊಣೆಯನ್ನು ಅದಾನಿಗೆ ವಹಿಸಿದಂತಾಗುತ್ತದೆ. ಅದಾನಿ ಕಂಪನಿಯೂ ಭಾರತದಲ್ಲಿ ಏರ್ಪೋರ್ಟ್ ನಿರ್ವಹಣೆ ಹೊಣೆ ಹೊತ್ತ ದೈತ್ಯ ಕಂಪನಿಯಾಗಿ ಹೊರಹೊಮ್ಮಲಿದೆ.
ದೇಶದ ಒಟ್ಟು 12 ವಿಮಾನ ನಿಲ್ದಾಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಿದ್ದು 13 ಸಾವಿರ ಕೋಟಿ ಹೂಡಿಕೆ ನಿರೀಕ್ಷೆ ಇದೆ ಎಂದು ವಿಮಾನ ಸಚಿವಾಲಯ ತಿಳಿಸಿದೆ.
he Adani Group is all set to take over operation and management of Mangaluru International Airport on October 31, as per the announcement by Airports Authority of India (AAI) on Thursday. Following the pandemic, taking over the airport was delayed by the Adani Group.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm