ಬ್ರೇಕಿಂಗ್ ನ್ಯೂಸ್
10-03-23 06:14 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ 14ನೇ ವಾರ್ಡಿನ ನಡುಕುಮೇರು ಎಂಬಲ್ಲಿ ಸರ್ವೆ ನಂಬರ್ 262/1ರ 2 ಎಕರೆ 40 ಸೆಂಟ್ಸ್ ಜಾಗವನ್ನ ಅತಿಕ್ರಮಿಸಿದ ನುಂಗಣ್ಣರು ಮೂರು ತಾರಸಿ ಮನೆ ನಿರ್ಮಿಸುತ್ತಿದ್ದರೂ ಉಳ್ಳಾಲ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಕಣ್ಣಿಗೆ ಬಟ್ಟೆ ಕಟ್ಟಿದಂತೆ ವರ್ತಿಸುತ್ತಿದ್ದಾರೆ.
ಕೋಟೆಕಾರು ಪಟ್ಟಣ ವ್ಯಾಪ್ತಿಯ ನಡುಕುಮೇರು ಎಂಬಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆ ಅಂಚಿನಲ್ಲಿರುವ 2 ಎಕರೆ 40 ಸೆಂಟ್ಸ್ ಸರಕಾರಿ ಭೂಮಿಯನ್ನ ನುಂಗಣ್ಣರು ಅತಿಕ್ರಮಿಸಿ ಮಾರಾಟ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಈಗಾಗಲೇ ಮೂರು ತಾರಸಿ ಮನೆಗಳು ನಿರ್ಮಾಣ ಹಂತದಲ್ಲಿದ್ದು ಮತ್ತೊಂದು ಮನೆ ನಿರ್ಮಾಣಕ್ಕೆ ಭೂಮಿಪೂಜೆ ನಡೆದು ಅಡಿಪಾಯ ಹಾಕಲು ಸಿದ್ಧತೆ ನಡೆಸಿದ್ದಾರೆ.


ವಿಶೇಷವೆಂದರೆ ಭೂಮಿ ಅತಿಕ್ರಮಣದ ಬಗ್ಗೆ ಕೋಟೆಕಾರು ಪಟ್ಟಣ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿ ನವ್ಯಾ ಅವರು ಕಳೆದ ಫೆ.24 ರಂದೇ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಅವರಿಗೆ ವರದಿ ಹಾಕಿದ್ದರೂ ಅತಿಕ್ರಮಣದ ವಿರುದ್ಧ ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಮಾಧ್ಯಮದವರು ತಹಶೀಲ್ದಾರ್ ಗೆ ಕರೆ ಮಾಡಿ ಕೇಳಿದಾಗ ಕಂದಾಯ ನಿರೀಕ್ಷಕರಿಗೆ ಕರೆ ಮಾಡಲು ಹೇಳಿದ್ದಾರೆ. ಕಂದಾಯ ನಿರೀಕ್ಷಕ ಮಂಜುನಾಥರನ್ನ ಕೇಳಿದಾಗ ತಾನು ನಿನ್ನೆ, ಮೊನ್ನೆ ಸ್ಥಳಕ್ಕೆ ದಾಳಿ ನಡೆಸಿ ಕಾಮಗಾರಿ ತಡೆದಿದ್ದೇನೆ, ಇವತ್ತೂ ಕಾಮಗಾರಿ ನಡೀತಿದಿಯಾ ಅಂಥ ಮಾಧ್ಯಮದವರಲ್ಲೇ ಕೇಳಿದ್ದಾರೆ. ಶುಕ್ರವಾರ ಸರ್ವೆಯರನ್ನ ಕಳಿಸಿ ನಕ್ಷೆ ನೋಡಿ ವರದಿ ತಗೊಂಡು ಕ್ರಮ ಕೈಗೊಳ್ಳುತ್ತೇನೆಂದು ಮಂಜುನಾಥ್ ಸಬೂಬು ನೀಡಿದ್ದಾರೆ.


ಸರಕಾರಿ ಜಮೀನು ಕಣ್ಣೆದುರೇ ಅತಿಕ್ರಮಣವಾಗುತ್ತಿರುವುದನ್ನ ಮನಗಂಡ ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲತಿಯವರು ಕಳೆದ ಮಾ.8 ರ ಬುಧವಾರವೇ ಸರ್ವೆ ನಂಬರ್ 262/1 ರ 2.40 ಎಕರೆ ಜಾಗವನ್ನ ಪಟ್ಟಣ ವ್ಯಾಪ್ತಿಗೆ ಸುಸಜ್ಜಿತ ಪಾರ್ಕ್, ಈಜುಕೊಳ ನಿರ್ಮಾಣಕ್ಕೆ ಕಾಯ್ದಿರಿಸುವಂತೆ ತಹಶೀಲ್ದಾರ್ ಗೆ ಪತ್ರ ಬರೆದಿದ್ದಾರೆ.
ಕೆಲವು ಅಧಿಕಾರಿಗಳ ನೌಟಂಕಿತನದಿಂದಲೇ ಈಗಾಗಲೇ ಕೋಟೆಕಾರು ಪಟ್ಟಣ ವ್ಯಾಪ್ತಿಯ ಎಕರೆಗಟ್ಟಲೆ ಜಾಗವನ್ನ ನುಂಗಣ್ಣರು ಅತಿಕ್ರಮಿಸಿದ್ದಾರೆ. ಪಟ್ಟಣ ವ್ಯಾಪ್ತಿಯ ಸಾವಿರಕ್ಕೂ ಅಧಿಕ ಮಂದಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದವರಿದ್ದಾರೆ. ನಿವೇಶನ ರಹಿತರಿಗೆ ಕೊಡಬೇಕಾದ ಕೋಟಿ ಬೆಲೆ ಬಾಳುವ ಸರಕಾರಿ ಭೂಮಿ ಅತಿಕ್ರಮಣವನ್ನ ಅಧಿಕಾರಿಗಳು ಶೀಘ್ರವೇ ತಡೆಯಬೇಕಿದೆ.
Mangalore Government land encroached on building private homes at Kotekar illegally.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am