ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm