ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm