ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm