ಬ್ರೇಕಿಂಗ್ ನ್ಯೂಸ್
10-03-23 10:54 pm Mangalore Correspondent ಕರಾವಳಿ
ಮಂಗಳೂರು, ಮಾ.10 : ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭಗೊಂಡು ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಸಮರ್ಥವಾಗಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ಸೇತುವೆ ಕಾಮಗಾರಿಗೆ ನದಿಗೆ ಹಾಕಿರುವ ಭಾರೀ ಮಣ್ಣಿನಿಂದಾಗಿ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಇದೆ. ಜೊತೆಗೆ, ಹಳೆ ಸೇತುವೆ ಕುಸಿಯುವ ಭೀತಿಯೂ ಇದೆ. ಹೀಗಾಗಿ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಪಂಜಿಮೊಗರು ವಲಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಕೂಳೂರು ಸೇತುವೆ ಕಾಮಗಾರಿ ಬಗ್ಗೆ ಸ್ಥಳೀಯ ಶಾಸಕ ಭರತ್ ಶೆಟ್ಟಿಗಾಗಲಿ, ಸಂಸದರಿಗಾಗಲೀ ಆಸಕ್ತಿ ಇದ್ದಂತೆ ಕಾಣುತ್ತಿಲ್ಲ. ಈ ಕಾಮಗಾರಿಯ ಕಮಿಷನ್ ವಿಚಾರವಾಗಿ ಕಾಮಗಾರಿ ನಿಂತಿರಬಹುದೇ ಎಂದು ಸಾರ್ವಜನಿಕ ವಲಯದಲ್ಲಿ ಸುದ್ದಿ ಇದೆ. ಕೋಟಿ ಕೋಟಿ ಕಾಮಗಾರಿ ಬಗ್ಗೆ ಬ್ಯಾನರ್ ಹಾಕುವ ಶಾಸಕರ ಕಾಮಗಾರಿ ಎಲ್ಲಿ ನಡೆಯುತ್ತಿದೆ ಎಂದು ತಿಳಿಯುತ್ತಿಲ್ಲ. ಮಾತೆತ್ತಿದ್ದರೆ ಗುರುಪುರ ಸೇತುವೆ ಬಗ್ಗೆ ಮಾತನಾಡುವ ಇವರಿಗೆ ಅಪಾಯದ ಅಂಚಿನಲ್ಲಿರುವ ಕೂಳೂರು ಸೇತುವೆ ಬಗ್ಗೆ ಆಸಕ್ತಿ ಇಲ್ಲದಿರುವುದು ವಿಪರ್ಯಾಸ ಎಂದರು.

ಉಡುಪಿ, ಮಂಗಳೂರು ಸಂಪರ್ಕದ ಅತೀ ವಾಹನ ದಟ್ಟಣೆ ಇರುವ ಕೂಳೂರು ಸೇತುವೆ ಕುಸಿದರೆ ಉಂಟಾಗುವ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿ.ಕೆ ಇಮ್ತಿಯಾಝ್ ಮಾತನಾಡಿ ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು ಕಳೆದರೂ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಘಟಕದ ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು
Mangalore Dyfi protest over delay by NHAI to complete Kuluru bridge.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm